ಬ್ರೇಕಿಂಗ್ ನ್ಯೂಸ್
12-09-26 09:40 pm HK News Staffer ಕರ್ನಾಟಕ
ಬಳ್ಳಾರಿ, ಸೆ 12: ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿತ್ತು. ಅದನ್ನು ಕರಗಿಸಿಕೊಳ್ಳಲು ಬಳ್ಳಾರಿ ಚಲೋ ಪಾದಯಾತ್ರೆ ಮಾಡಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಬಿ. ನಾಗೇಂದ್ರ ವ್ಯಂಗ್ಯವಾಡಿದರು.
ತಾಲೂಕಿನ ರೂಪನಗುಡಿ ಗ್ರಾಮದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೊಲೆಸ್ಟ್ರಾಲ್ ಮತ್ತು ಕೊಬ್ಬು ಕಡಿಮೆ ಮಾಡಿಕೊಳ್ಳಲು ಬಿಜೆಪಿ ನಾಯಕರು ಪಾದಯಾತ್ರೆ ಮಾಡಿದ್ದಾರೆ. ಮನೆಯಲ್ಲಿ ವಾಕಿಂಗ್ ಮಾಡಲು ಅವರಿಗೆ ಸಮಯ ಇರಲಿಲ್ಲ. ಈಗ ಪಾದಯಾತ್ರೆ ಮಾಡಿ ಒಬ್ಬೊಬ್ಬರು ಐದು ಕೆ.ಜಿ. ತೂಕ ಇಳಿಸಿಕೊಂಡಿದ್ದಾರೆ’ ಎಂದು ಲೇವಡಿ ಮಾಡಿದರು.
ಬಿಜೆಪಿಯವರು ಯಾವುದೇ ವಿಷಯವಿಲ್ಲದೆ ಪಾದಯಾತ್ರೆ ಮಾಡಿದ್ದಾರೆ. ಬಿಜೆಪಿಯವರ ಒತ್ತಡಕ್ಕೆ ಮಣಿದು ನಾನು ರಾಜೀನಾಮೆ ನೀಡಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೆ’ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯಲ್ಲಿನ ಕೆಟ್ಟತನವನ್ನು ತೊಳೆದು ಹಾಕಿಕೊಳ್ಳಲು ಅವರು ಪಾದಯಾತ್ರೆ ಮಾಡಿದ್ದಾರೆ. ಅವರ ಪಾದಯಾತ್ರೆಯನ್ನು ನಾನು ಸ್ವಾಗತಿಸುತ್ತೇನೆ. ಬಿಜೆಪಿಯವರ ಆರೋಗ್ಯ ಮತ್ತು ಆಯುಷ್ಯ ಚೆನ್ನಾಗಿರಲಿ’ ಎಂದು ಹೇಳಿದರು
‘2028ರ ಚುನಾವಣೆಯಲ್ಲಿ ಬಿಜೆಪಿ ಬಲಿಷ್ಠವಾಗಿ ಬರಲಿ. ಅವರ ಸವಾಲನ್ನು ನಾವು ಎರಡು ಪಟ್ಟು ಶಕ್ತಿಯಿಂದ ಎದುರಿಸುತ್ತೇವೆ. ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ 10 ಸ್ಥಾನ ಗೆಲ್ಲಲಿದೆ ಎಂಬ ಸವಾಲನ್ನು ನಾವು ಸ್ವೀಕರಿಸುತ್ತೇವೆ. ಬಳ್ಳಾರಿ ಮಾತ್ರವಲ್ಲ, ಇಡೀ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. 2028ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 153 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ’ ಎಂದು ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm