ಬ್ರೇಕಿಂಗ್ ನ್ಯೂಸ್
16-09-26 10:40 pm kannada news ಕರ್ನಾಟಕ
ಬೆಂಗಳೂರು, ಸೆ.16 ಕನ್ನಡ ಚಿತ್ರರಂಗದ ಶ್ರೇಷ್ಠ ನಟರಾಗಿ ಗುರುತಿಸಿಕೊಂಡಿರುವ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ಸಾಲಿನ ಪ್ರತಿಷ್ಠಿತ ʻದಾದಾ ಸಾಹೇಬ್ ಫಾಲ್ಕೆʼ ಪ್ರಶಸ್ತಿ ಪ್ರಕಟವಾಗಿದೆ. ಭಾರತೀಯ ಚಲನಚಿತ್ರ ರಂಗಕ್ಕೆ ನೀಡಿದ ಕೊಡುಗೆಯನ್ನ ಪರಿಗಣಿಸಿ ʻದಾದಾಸಾಹೇಬ್ ಫಾಲ್ಕೆʼ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.
1995ರಲ್ಲಿ ಕನ್ನಡ ಚಿತ್ರರಂಗದ ಡಾ. ರಾಜ್ಕುಮಾರ್ ಅವರಿಗೆ ಮೊದಲ ಬಾರಿಗೆ ʻದಾದಾಸಾಹೇಬ್ ಫಾಲ್ಕೆʼ ಪ್ರಶಸ್ತಿ ಲಭಿಸಿತ್ತು. ತದನಂತರ, 2008ರಲ್ಲಿ ಕನ್ನಡಿಗ ವಿ.ಕೆ ಮೂರ್ತಿ ಅವರಿಗೆ ಈ ಪ್ರಶಸ್ತಿ ಒಲಿದುಬಂದಿತ್ತು. ಈಗ ಬರೋಬ್ಬರಿ 16 ವರ್ಷಗಳ ಸುದೀರ್ಘ ವಿರಾಮದ ಬಳಿಕ ಮತ್ತೊಬ್ಬ ಕನ್ನಡದ ನಟ ಅನಂತ್ ನಾಗ್ ಅವರಿಗೆ ಅತ್ಯುನ್ನತ ಗೌರವ ಲಭಿಸಿದೆ. ಅಭಿನಯ ಕ್ಷೇತ್ರದಲ್ಲಿ ಡಾ. ರಾಜ್ಕುಮಾರ್ ನಂತರ ಚಿತ್ರರಂಗದ ಶ್ರೇಷ್ಠ ಪ್ರಶಸ್ತಿಯೆಂದು ಗುರುತಿಸಲ್ಪಡುವ ಫಾಲ್ಕೆ ಪಡೆಯುತ್ತಿರುವ ಎರಡನೇ ನಟ ಎಂಬ ಹೆಗ್ಗಳಿಕೆ ಅನಂತ್ ನಾಗ್ ಅವರದ್ದು. ಕನ್ನಡ, ಹಿಂದಿ, ಮರಾಠಿ, ತೆಲುಗು ಮತ್ತು ಮಲೆಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ತಮ್ಮ ನಟನೆಯ ತೋರಿಸಿದರೂ, ಅತಿ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು ಬೆಳೆದಿದ್ದು ಕನ್ನಡದಲ್ಲಿ.
ಸಿನಿಮಾ ರಂಗದ ಅತ್ಯುನ್ನತ ಗೌರವವೆನಿಸಿದ ಈ ಪ್ರಶಸ್ತಿಯು ಅನಂತ್ ನಾಗ್ ಅವರ ಹಲವು ದಶಕಗಳ ಅದ್ಭುತ ಸಿನಿಮಾ ಪಯಣಕ್ಕೆ ಸಂದ ಗೌರವವೂ ಹೌದು. ಇದೇ ಸೆಪ್ಟೆಂಬರ್ 22, 2026ರಂದು ಗುಜರಾತ್ನ ಏಕ್ತಾ ನಗರದಲ್ಲಿ ನಡೆಯಲಿರುವ ʻ72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿʼ ಪ್ರದಾನ ಸಮಾರಂಭದಲ್ಲಿ ಫಾಲ್ಕೆ ಗೌರವವನ್ನ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಶಸ್ತಿ ಪ್ರಕಟವಾಗುತ್ತಿದ್ದಂತೆ ಚಿತ್ರರಂಗದ ಪ್ರಮುಖರು, ಸಚಿವ ಹೆಚ್ಡಿ ಕುಮಾರಸ್ವಾಮಿ, ಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕಾರಣಿಗಳು ಹಾಗೂ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm