ಬ್ರೇಕಿಂಗ್ ನ್ಯೂಸ್
12-08-20 11:55 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ನಿನ್ನೆಯ ಡಿಜಿ ಹಳ್ಳಿ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕಾನೂನು ವಿರೋಧಿ ಕೃತ್ಯಕ್ಕೆ ನಮ್ಮ ಖಂಡನೆ ಇದೆ. ಯಾವುದೇ ಧರ್ಮ, ದೇವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳಿಗೆ ಖಂಡನೆ ಇದೆ. ನವೀನ್ ಕಟ್ಟಾ ಬಿಜೆಪಿ ಅಭಿಮಾನಿ. ಆತ ಬಿಜೆಪಿಗೆ ಮತ ಹಾಕಿದ್ದ ಬಗ್ಗೆಯೂ ಪೋಸ್ಟ್ ಮಾಡಿದ್ದಾನೆ. ನವೀನ್ ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಮಾಡುತ್ತಿದ್ದ. ನವೀನ್ಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೂ ರಾಜಕೀಯ ಸಂಬಂಧ ಇಲ್ಲ. ನವೀನ್ಗೆ ಬಿಜೆಪಿ ಜೊತೆ ನಿಕಟ ಸಂಪರ್ಕ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ, ಸಲೀಂ ಅಹಮದ್, ನಾಸೀರ್ ಅಹಮದ್ ಭಾಗಿ ಈಶ್ವರ್ ಖಂಡ್ರೆ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿ ಮಾತನಾಡಿದ ಡಿಕೆಶಿ, ಪೊಲೀಸರು ದೂರು ಬಂದಾಗಲೇ ಕ್ರಮ ತೆಗೆದುಕೊಳ್ಳಬೇಕಿತ್ತು. ಘಟನೆಗೆ ಪೊಲೀಸರೇ ಕಾರಣ. ಅವರ ವಿಳಂಬವೇ ಕಾರಣ. ಪೊಲೀಸರು ಘಟನೆ ತಡೆಯಲು ವಿಫಲರಾಗಿದ್ದಾರೆ ಎಂದು ಆರೋಪ ಮಾಡಿದರು.

ಪೊಲೀಸರು ಶಾಸಕರು, ಶಾಸಕರ ಮನೆಗೂ ರಕ್ಷಣೆ ಕೊಡಲಿಲ್ಲ. ಪೊಲೀಸರು ಸುಮೋಟೋ ಅಡಿ ದೂರು ದಾಖಲಿಸಿ ಸಂಜೆಯೇ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ವಿಳಂಬ ಮಾಡಿದರು. ಆ ಭಾಗ ಸೂಕ್ಚ್ಮ ಪ್ರದೇಶ. ಫೇಸ್ ಬುಕ್ ಪೋಸ್ಟ್ ಬಂದಾಗ ಪೊಲೀಸರು ಯಾಕೆ ಸುಮ್ಮನಿದ್ದರು. ಪೊಲೀಸರಿಗೆ ಇದು ಗೊತ್ತಿದ್ದೂ ಸುಮ್ಮನಿದ್ದರು. ಘಟನೆಯ ಹೊಣೆಯನ್ನು ಪೊಲೀಸರೇ ಹೊತ್ತುಕೊಳ್ಳಬೇಕು. ಪೊಲೀಸ್ ಠಾಣೆಯನ್ನೇ ಪೊಲೀಸರು ರಕ್ಷಿಸಿಕೊಳ್ಳಲು ಆಗಲಿಲ್ಲ. ನಮ್ಮ ಶಾಸಕರಿಗೂ ರಕ್ಷಣೆ ಕೊಡಲಿಲ್ಲ. ಘಟನೆ ಹಿಂದೆ ಸಂಚು ಇದೆ. ಘಟನೆ ಬಗ್ಗೆ ಪರಿಶೀಲನೆಗೆ ನಮ್ಮ 6 ಜನ ನಾಯಕರ ತಂಡ ಹೋಗುತ್ತಿದೆ. ಜೊತೆಗೆ ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm