ಬ್ರೇಕಿಂಗ್ ನ್ಯೂಸ್
13-01-21 10:52 am Source: FilimiBeat ಕರ್ನಾಟಕ
ಬೆಂಗಳೂರು, ಜ.13: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರುವ ಬಹುನಿರೀಕ್ಷೆಯ ಕೆಜಿಎಫ್-2 ಟೀಸರ್ ನಂ.1 ಟ್ರೆಂಡಿಂಗ್ ನಲ್ಲಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡು ಟೀಸರ್ ದಾಖಲೆ ನಿರ್ಮಿಸಿದೆ.
ಇಡೀ ಭಾರತೀಯ ಸಿನಿಮಾರಂಗವೇ ಕಾತರದಿಂದ ಕಾಯುತ್ತಿರುವ ಚಿತ್ರದ ಟೀಸರ್ ಗೆ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದು ನೋಡಿ ಭಾರತೀಯ ಸಿನಿಮಾರಂಗ ದಂಗ್ ಆಗಿದೆ. ಕನ್ನಡ ಚಿತ್ರದ ಟೀಸರ್ ವೊಂದು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ.
ಟೀಸರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೀಸರ್ ಸಂಬಂಧ ಯಶ್ ಗೆ ನೋಟಿಸ್ ನೀಡಿದೆ. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ 'ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ' ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ.
ಲಕ್ಷಾಂತರ ಯುವ ಅಭಿಮಾನಿಗಳನ್ನು ಹೊಂದಿರುವ ಮತ್ತು ಸಾಮಾಜಿಕ ಕಳಕಳಿ ಇರುವ ಯಶ್ ಇಂತಹ ದೃಶ್ಯಗಳನ್ನು ಯುವ ಜನತೆ ಅನುಸರಿಸುವುದು ಸಾಮಾನ್ಯ. ಇದರಿಂದ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. ಅಂದಹಾಗೆ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗನ್ ನಿಂದ ಸಿಗರೇಟು ಹಚ್ಚುತ್ತಿರುವ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಈ ದೃಶ್ಯಕ್ಕೆ ಈಗ ಆಕ್ಷೇಪ ವ್ಯಕ್ತವಾಗಿದೆ.
Health department officials issue notice to KGF 2 Actor Yash for not explicating No Smoking Heading while using a gun to smoke in the movie teaser.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm