ಬ್ರೇಕಿಂಗ್ ನ್ಯೂಸ್
13-01-21 10:52 am Source: FilimiBeat ಕರ್ನಾಟಕ
ಬೆಂಗಳೂರು, ಜ.13: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರುವ ಬಹುನಿರೀಕ್ಷೆಯ ಕೆಜಿಎಫ್-2 ಟೀಸರ್ ನಂ.1 ಟ್ರೆಂಡಿಂಗ್ ನಲ್ಲಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡು ಟೀಸರ್ ದಾಖಲೆ ನಿರ್ಮಿಸಿದೆ.
ಇಡೀ ಭಾರತೀಯ ಸಿನಿಮಾರಂಗವೇ ಕಾತರದಿಂದ ಕಾಯುತ್ತಿರುವ ಚಿತ್ರದ ಟೀಸರ್ ಗೆ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದು ನೋಡಿ ಭಾರತೀಯ ಸಿನಿಮಾರಂಗ ದಂಗ್ ಆಗಿದೆ. ಕನ್ನಡ ಚಿತ್ರದ ಟೀಸರ್ ವೊಂದು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ.
ಟೀಸರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೀಸರ್ ಸಂಬಂಧ ಯಶ್ ಗೆ ನೋಟಿಸ್ ನೀಡಿದೆ. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ 'ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ' ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ.
ಲಕ್ಷಾಂತರ ಯುವ ಅಭಿಮಾನಿಗಳನ್ನು ಹೊಂದಿರುವ ಮತ್ತು ಸಾಮಾಜಿಕ ಕಳಕಳಿ ಇರುವ ಯಶ್ ಇಂತಹ ದೃಶ್ಯಗಳನ್ನು ಯುವ ಜನತೆ ಅನುಸರಿಸುವುದು ಸಾಮಾನ್ಯ. ಇದರಿಂದ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. ಅಂದಹಾಗೆ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗನ್ ನಿಂದ ಸಿಗರೇಟು ಹಚ್ಚುತ್ತಿರುವ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಈ ದೃಶ್ಯಕ್ಕೆ ಈಗ ಆಕ್ಷೇಪ ವ್ಯಕ್ತವಾಗಿದೆ.
Health department officials issue notice to KGF 2 Actor Yash for not explicating No Smoking Heading while using a gun to smoke in the movie teaser.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm