ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm