ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:03 pm
HK News Staffer
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm