ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm