ಬ್ರೇಕಿಂಗ್ ನ್ಯೂಸ್
22-01-21 09:10 am Santosh ಕರ್ನಾಟಕ
ಶಿವಮೊಗ್ಗ, ಜನವರಿ 22: ಇಲ್ಲಿನ ಹುಣಸವಾಡಿಯ ಅಬ್ಬಲಗೇರಿ ಎಂಬಲ್ಲಿ ರೈಲ್ವೆ ಇಲಾಖೆಗೆ ಸೇರಿದ ಕ್ರಷರ್ನಲ್ಲಿ ಭಾರಿ ಸ್ಪೋಟ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಲೋಡ್ ಗಟ್ಟಲೆ ಡೈನಾಮೈಟ್ ಸಾಗಿಸುತ್ತಿದ್ದ ವೇಳೆ ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ. ಸ್ಫೋಟಗೊಂಡ ಲಾರಿಯಲ್ಲಿ ಎಷ್ಟು ಮಂದಿ ಇದ್ದರು, ಕ್ರಷರ್ ಬಳಿ ಎಷ್ಟು ಮಂದಿ ಇದ್ದರು ಎಂಬ ಸರಿಯಾದ ಮಾಹಿತಿ ಯಾರಲ್ಲೂ ಇಲ್ಲ. ಸ್ಫೋಟದ ತೀವ್ರತೆಗೆ ದೇಹ ಛಿದ್ರಗೊಂಡು ಕಿಮೀ ದೂರಕ್ಕೆ ಎಸೆಯಲ್ಪಟ್ಟಿದೆ. ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ.


ಸ್ಫೋಟದ ಸದ್ದು ಇಡೀ ಶಿವಮೊಗ್ಗ , ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೇಳಿಬಂದಿದ್ದು ಭೂಕಂಪ ಆಗಿದೆ ಎಂದು ಜನ ಹೆದರಿ ಮನೆಯಿಂದ ಹೊರಗೆ ಓಡಿಬಂದಿದ್ದರು. ತೀರ್ಥಹಳ್ಳಿ, ಕೊಪ್ಪ , ಕಡೂರು ಹೀಗೆ ಮಲೆನಾಡಿನಾದ್ಯಂತ ನಿನ್ನೆ ರಾತ್ರಿ ಈ ಭಾರೀ ಸದ್ದು ಆತಂಕಕ್ಕೆ ಕಾರಣವಾಗಿತ್ತು.
ರೈಲ್ವೆ ಕ್ರಷರ್ನಲ್ಲಿ ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ತರಲಾಗಿದ್ದ ಡೈನಮೈಟ್ ಸ್ಪೋಟಕ ಅನ್ ಲೋಡಿಂಗ್ ವೇಳೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಮೃತದೇಹಗಳು ಛಿದ್ರವಾಗಿ ಬಿದ್ದಿದ್ದು ಗುರುತು ಸಿಗದಂತಾಗಿದೆ.
ಸ್ಪೋಟ ನಡೆದ ಸ್ಥಳಕ್ಕೆ ರಾತ್ರಿಯೇ ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸ್ಫೋಟದ ಸಾಧ್ಯತೆ ಇರುವ ಡೈನಮೈಟ್ ಪತ್ತೆಗಾಗಿ ಮಂಗಳೂರು ಮತ್ತು ಬೆಂಗಳೂರಿನಿಂದ ಎರಡು ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸದ್ಯ ಘಟನಾ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಸ್ಥಳಕ್ಕೆ ಯಾರನ್ನೂ ಒಳ ಬರದಂತೆ ನಿರ್ಬಂಧ ಹೇರಿದ್ದು ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
Eight people were killed in an explosion at a stone mining quarry in at Hunasondi near village Abbalagere of Shivamogga district.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm