ಬ್ರೇಕಿಂಗ್ ನ್ಯೂಸ್
22-01-21 09:10 am Santosh ಕರ್ನಾಟಕ
ಶಿವಮೊಗ್ಗ, ಜನವರಿ 22: ಇಲ್ಲಿನ ಹುಣಸವಾಡಿಯ ಅಬ್ಬಲಗೇರಿ ಎಂಬಲ್ಲಿ ರೈಲ್ವೆ ಇಲಾಖೆಗೆ ಸೇರಿದ ಕ್ರಷರ್ನಲ್ಲಿ ಭಾರಿ ಸ್ಪೋಟ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಲೋಡ್ ಗಟ್ಟಲೆ ಡೈನಾಮೈಟ್ ಸಾಗಿಸುತ್ತಿದ್ದ ವೇಳೆ ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ. ಸ್ಫೋಟಗೊಂಡ ಲಾರಿಯಲ್ಲಿ ಎಷ್ಟು ಮಂದಿ ಇದ್ದರು, ಕ್ರಷರ್ ಬಳಿ ಎಷ್ಟು ಮಂದಿ ಇದ್ದರು ಎಂಬ ಸರಿಯಾದ ಮಾಹಿತಿ ಯಾರಲ್ಲೂ ಇಲ್ಲ. ಸ್ಫೋಟದ ತೀವ್ರತೆಗೆ ದೇಹ ಛಿದ್ರಗೊಂಡು ಕಿಮೀ ದೂರಕ್ಕೆ ಎಸೆಯಲ್ಪಟ್ಟಿದೆ. ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ.


ಸ್ಫೋಟದ ಸದ್ದು ಇಡೀ ಶಿವಮೊಗ್ಗ , ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೇಳಿಬಂದಿದ್ದು ಭೂಕಂಪ ಆಗಿದೆ ಎಂದು ಜನ ಹೆದರಿ ಮನೆಯಿಂದ ಹೊರಗೆ ಓಡಿಬಂದಿದ್ದರು. ತೀರ್ಥಹಳ್ಳಿ, ಕೊಪ್ಪ , ಕಡೂರು ಹೀಗೆ ಮಲೆನಾಡಿನಾದ್ಯಂತ ನಿನ್ನೆ ರಾತ್ರಿ ಈ ಭಾರೀ ಸದ್ದು ಆತಂಕಕ್ಕೆ ಕಾರಣವಾಗಿತ್ತು.
ರೈಲ್ವೆ ಕ್ರಷರ್ನಲ್ಲಿ ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ತರಲಾಗಿದ್ದ ಡೈನಮೈಟ್ ಸ್ಪೋಟಕ ಅನ್ ಲೋಡಿಂಗ್ ವೇಳೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಮೃತದೇಹಗಳು ಛಿದ್ರವಾಗಿ ಬಿದ್ದಿದ್ದು ಗುರುತು ಸಿಗದಂತಾಗಿದೆ.
ಸ್ಪೋಟ ನಡೆದ ಸ್ಥಳಕ್ಕೆ ರಾತ್ರಿಯೇ ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸ್ಫೋಟದ ಸಾಧ್ಯತೆ ಇರುವ ಡೈನಮೈಟ್ ಪತ್ತೆಗಾಗಿ ಮಂಗಳೂರು ಮತ್ತು ಬೆಂಗಳೂರಿನಿಂದ ಎರಡು ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸದ್ಯ ಘಟನಾ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಸ್ಥಳಕ್ಕೆ ಯಾರನ್ನೂ ಒಳ ಬರದಂತೆ ನಿರ್ಬಂಧ ಹೇರಿದ್ದು ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
Eight people were killed in an explosion at a stone mining quarry in at Hunasondi near village Abbalagere of Shivamogga district.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm