ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm