ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm