ಬ್ರೇಕಿಂಗ್ ನ್ಯೂಸ್
27-01-21 10:47 am Bangalore Correspondent ಕರ್ನಾಟಕ
ಬೆಂಗಳೂರು, ಜ. 27: ಅಕ್ರಮ ಆಸ್ತಿ ಪ್ರಕರಣದಲ್ಲಿ ಐದು ವರ್ಷಗಳ ಶಿಕ್ಷೆ ಪೂರೈಸಿದ ತಮಿಳುನಾಡಿನ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ, ಅವರ ಸಂಬಂಧಿ ಇಳವರಸಿ ಮತ್ತು ಸಹೋದರ ಸುಧಾಕರ್ ಅವರ ಜೈಲುವಾಸ ಇಂದಿಗೆ ಕೊನೆಗೊಳ್ಳಲಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದ ಮೂವರೂ ಬುಧವಾರ ಬಿಡುಗಡೆಯಾಗಲಿದ್ದಾರೆ.
ಆದರೆ ಕೋವಿಡ್ ಪಾಸಿಟಿವ್ಗೆ ಒಳಗಾಗಿರುವ ಶಶಿಕಲಾ ಮತ್ತು ಇಳವರಸಿ ಇಬ್ಬರೂ ಪ್ರಸ್ತುತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಆಸ್ಪತ್ರೆಯಿಂದಲೇ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಜೈಲಿನಿಂದ ಬಿಡುಗಡೆ ಮಾಡುವ ಮುನ್ನ ಕೈದಿಗಳಿಂದ ವಿವಿಧ ದಾಖಲೆಗಳಿಗೆ ಸಹಿ ಹಾಕಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಆದರೆ ಶಶಿಕಲಾ ಮತ್ತು ಇಳವರಸಿ ಅವರು ಆಸ್ಪತ್ರೆಯಲ್ಲಿರುವ ಕಾರಣ ಕಾರಾಗೃಹ ಅಧಿಕಾರಿಗಳು ಮಂಗಳವಾರ ಸ್ವತಃ ಆಸ್ಪತ್ರೆಗೆ ತೆರಳಿ, ಪಿಪಿಇ ಕಿಟ್ ಧರಿಸಿ ಅವರ ಸಹಿ ಸಂಗ್ರಹಿಸಿದ್ದಾರೆ. ಈ ಮೂಲಕ ಬುಧವಾರ ಅವರ ಬಿಡುಗಡೆಗೆ ಬೇಕಾದ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ.
ಮಾಜಿ ಸಿಎಂ ಜಯಲಲಿತಾ ಆಪ್ತೆಯಾಗಿದ್ದ ಶಶಿಕಲಾ, ಜಯಾ ಜೊತೆಗಿದ್ದುಕೊಂಡೇ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದರು. ಜಯಲಲಿತಾ ಅದೇ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಈಗ ಚುನಾವಣೆ ಸಂದರ್ಭದಲ್ಲೇ ಶಶಿಕಲಾ ತಮಿಳುನಾಡಿಗೆ ಮರಳುತ್ತಿದ್ದು ಚುನಾವಣೆ ರಾಜಕಾರಣಕ್ಕೆ ಎಂಟ್ರಿ ಕೊಡ್ತಾರೆಯೇ ಎನ್ನುವ ಕುತೂಹಲ ಎದ್ದಿದೆ.
Four years after she was convicted in a disproportionate assets case, V K Sasikala will Wednesday be freed from the Parappana Agrahara prison in Bengaluru. Sasikala, former AIADMK leader and a close aide of ex-Tamil Nadu chief minister late J Jayalalithaa.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm