ಬ್ರೇಕಿಂಗ್ ನ್ಯೂಸ್
28-01-21 02:39 pm Headline Karnataka News Network ಕರ್ನಾಟಕ
ಹಾಸನ, ಜ.28: ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿರುವಾಗಲೇ ಹಾಸನ ಜಿಲ್ಲೆಯ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿನ ಸ್ಫೋಟಕಗಳನ್ನು ಕಾಡಿನಲ್ಲಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಹಾಸನದ ಹೇಮಾವತಿ ನದಿ ದಂಡೆಯಲ್ಲಿ ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಪೊಲೀಸರ ತಲೆನೋವಿಗೆ ಕಾರಣವಾಗಿದೆ.

ಗೊರೂರು ಸಮೀಪದ ಹೇಮಾವತಿ ನದಿ ಅಣೆಕಟ್ಟು ಬಳಿಯ ಕಾಡಿನಲ್ಲಿ ಹತ್ತು ಕೇಜಿ ಅಮೋನಿಯಂ ನೈಟ್ರೇಟ್ ಮತ್ತು 200 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅರಣ್ಯದಲ್ಲಿ ಸ್ಫೋಟಕ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದ್ದಾರೆ. ಕಾಡಿನಲ್ಲಿ ಗುಂಡಿ ತೋಡಿ ಸ್ಫೋಟಕಗಳನ್ನು ಬಚ್ಚಿಡುವ ಕಾರ್ಯ ಮಾಡಿದ್ದರು.

ಶಿವಮೊಗ್ಗದ ಅಕ್ರಮ ಗಣಿಗಾರಿಕೆ ಪತ್ತೆಯಾದ ಬಳಿಕ ಹಾಸನದಲ್ಲಿಯೂ ಅಕ್ರಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೊರೂರು ಪಿಎಸ್ಐ ನೇತೃತ್ವದಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಭಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿದ್ದ ಸ್ಫೋಟಕಗಳನ್ನು ಎಲ್ಲೆಲ್ಲೋ ಬಚ್ಚಿಡುವ ಕಾರ್ಯ ಮಾಡುತ್ತಿದ್ದಾರೆ.
ಗಣಿಗಾರಿಕೆ ನಡೆಸುವ ಮಂದಿಯೇ ಇಷ್ಟು ಪ್ರಮಾಣದಲ್ಲಿ ಸ್ಫೋಟಕ ದಾಸ್ತಾನು ಮಾಡಿದ್ದಾರೆಯೇ ಅಥವಾ ಇನ್ನಾವುದೇ ಕೈವಾಡ ಇದ್ದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow a Major blast in Shivamogga the police have found 200 Gelatin Sticks in Hassan.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm