ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.

ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm