ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.


ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.

ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm