ಬ್ರೇಕಿಂಗ್ ನ್ಯೂಸ್
16-08-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇವರಜೀವನಹಳ್ಳಿ(ಡಿಜೆ ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆಜಿ ಹಳ್ಳಿ) ಹಾಗೂ ಕಾವಲ್ ಬೈರಸಂದ್ರ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಎಸ್ ಸಿ/ ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಹಿಂದುಳಿದ ಸಮುದಾಯದ ಡಿಜೆ ಹಳ್ಳಿ ನಿವಾಸಿ ದೂರು ಹಿನ್ನೆಲೆ SC-ST ಕಾಯ್ದೆ ಅಡಿ ಎಫ್ಐಆರ್ ಹಾಕಲಾಗಿದೆ ಎಂದು ಡಿಜೆ ಹಳ್ಳಿ ಠಾಣಾಧಿಕಾರಿ ಹೇಳಿದ್ದಾರೆ.
ಗಲಭೆ ನಡೆದ ದಿನ 500ರಿಂದ 600ಮಂದಿ ಅವಾಚ್ಯ ಶಬ್ಧಗಳಿಂದ ಬೈಯುತ್ತಾ, ರಾಡ್ ಗಳಿಂದ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಸುಮಾರು 200 ರಿಂದ 300 ಮಂದಿ ಮನೆ ಒಳಗೆ ನುಗ್ಗಿ ಟಿವಿ, ಸೋಫಾ ಸೇರಿದಂತೆ ಇತರೆ ವಸ್ತುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 5 ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನ ದೋಚಿದ್ದಾರೆ.
ಮನೆ ಒಳಗಡೆ ಗ್ಯಾಸ್ ಹಚ್ಚಿದ್ದರಿಂದ ಮನೆಯ ಗೋಡೆ ಕ್ರ್ಯಾಕ್ ಬಿಟ್ಟಿವೆ, ಮನೆ ಮುಂದೆ ನಿಲ್ಲಿಸಿದ್ದ ಸ್ಯಾಂಟ್ರೋ ಕಾರಿಗೂ ಬೆಂಕಿ ಹಚ್ಚಿದ್ದಾರೆ. ನಮಗೆ ಈಗ ವಾಸಿಸಲು ಬೇರೆ ಮನೆ ಇಲ್ಲ, ನಾವೆಲ್ಲ ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ್ದೇವೆ. ಒಟ್ಟಾರೆ 50ರಿಂದ 60 ಲಕ್ಷ ರೂ. ನಷ್ಟು ಆಸ್ತಿ ಹಾನಿಯಾಗಿದೆ ಎಂದು ಡಿಜೆ ಹಳ್ಳಿ ನಿವಾಸಿ ಪವನ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಡಿಜೆ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm