ಬ್ರೇಕಿಂಗ್ ನ್ಯೂಸ್
15-02-21 04:08 pm Headline Karnataka News Network ಕರ್ನಾಟಕ
ಮೈಸೂರು, ಫೆ.15: ಟಿವಿ, ಫ್ರಿಡ್ಜ್ ಇದ್ದವರು ಬಿಪಿಎಲ್ ಕಾರ್ಡನ್ನು ವಾಪಸ್ ನೀಡಬೇಕೆಂಬ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಬಡವರು ತಿಂಗಳ ಕಂತು ಕಟ್ಟಿಕೊಂಡು ಟಿವಿ, ಬೈಕ್ ಕೊಂಡಿರುತ್ತಾರೆ. ಹಾಗೆಂದು ಅವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕೆಂದು ಹೇಳುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಟಿವಿ ನೋಡಿಕೊಂಡೇ ಮಕ್ಕಳು ಪಾಠ ಕಲಿತಿದ್ದಾರೆ. ಈಗ ಪ್ರತಿ ಮನೆಯಲ್ಲೂ ಟಿವಿ ಇದ್ದೇ ಇರುತ್ತದೆ. ಟಿವಿ ಇಲ್ಲದಿರುತ್ತಿದ್ದರೆ ಮಕ್ಕಳಿಗೂ ಕಲಿಕೆ ಕಷ್ಟವಾಗುತ್ತಿತ್ತು. ಟಿವಿ ಇದೆಯೆಂದು ಅವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಸಲ್ಲದ ನಡೆಯಲ್ಲ. ಈ ಬಗ್ಗೆ ಉಮೇಶ ಕತ್ತಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಉಮೇಶ್ ಕತ್ತಿ ಹೇಳಿಗೆ ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಬಡವರ ಮನೆಯಲ್ಲೂ ಟಿವಿ ಇರುತ್ತದೆ. ಸಾಲ ಮಾಡಿಯಾದರೂ, ಬೈಕ್, ಸ್ಕೂಟರ್ ತೆಗೆದಿರುತ್ತಾರೆ. ಹಾಗೆಂದು ಬಿಪಿಎಲ್ ಕಾರ್ಡ್ ಹಿಂತೆಗೆಯುವ ಪ್ರಸ್ತಾಪ ಸರಿಯಲ್ಲ ಎಂದಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚು ಜಮೀನು, ಮನೆಯಲ್ಲಿ ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಅಂಥವರ ಬಿಪಿಎಲ್ ಕಾರ್ಡನ್ನು ರದ್ದುಪಡಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಸ್ವಇಚ್ಛೆಯಿಂದ ಈ ಸೌಲಭ್ಯ ಇದ್ದವರು ತಮ್ಮ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ಟಿವಿ ಇಲ್ಲದ ಮನೆ ಇದೆಯೇ ? ಬಿಜೆಪಿಯಿಂದ ‘ಗರೀಬೋಂಕೋ ಹಠಾವೋ’ ಮಾಡುತ್ತಿದ್ದಾರೆ
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm