ಬ್ರೇಕಿಂಗ್ ನ್ಯೂಸ್
15-02-21 04:08 pm Headline Karnataka News Network ಕರ್ನಾಟಕ
ಮೈಸೂರು, ಫೆ.15: ಟಿವಿ, ಫ್ರಿಡ್ಜ್ ಇದ್ದವರು ಬಿಪಿಎಲ್ ಕಾರ್ಡನ್ನು ವಾಪಸ್ ನೀಡಬೇಕೆಂಬ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಬಡವರು ತಿಂಗಳ ಕಂತು ಕಟ್ಟಿಕೊಂಡು ಟಿವಿ, ಬೈಕ್ ಕೊಂಡಿರುತ್ತಾರೆ. ಹಾಗೆಂದು ಅವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕೆಂದು ಹೇಳುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಟಿವಿ ನೋಡಿಕೊಂಡೇ ಮಕ್ಕಳು ಪಾಠ ಕಲಿತಿದ್ದಾರೆ. ಈಗ ಪ್ರತಿ ಮನೆಯಲ್ಲೂ ಟಿವಿ ಇದ್ದೇ ಇರುತ್ತದೆ. ಟಿವಿ ಇಲ್ಲದಿರುತ್ತಿದ್ದರೆ ಮಕ್ಕಳಿಗೂ ಕಲಿಕೆ ಕಷ್ಟವಾಗುತ್ತಿತ್ತು. ಟಿವಿ ಇದೆಯೆಂದು ಅವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಸಲ್ಲದ ನಡೆಯಲ್ಲ. ಈ ಬಗ್ಗೆ ಉಮೇಶ ಕತ್ತಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಉಮೇಶ್ ಕತ್ತಿ ಹೇಳಿಗೆ ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಬಡವರ ಮನೆಯಲ್ಲೂ ಟಿವಿ ಇರುತ್ತದೆ. ಸಾಲ ಮಾಡಿಯಾದರೂ, ಬೈಕ್, ಸ್ಕೂಟರ್ ತೆಗೆದಿರುತ್ತಾರೆ. ಹಾಗೆಂದು ಬಿಪಿಎಲ್ ಕಾರ್ಡ್ ಹಿಂತೆಗೆಯುವ ಪ್ರಸ್ತಾಪ ಸರಿಯಲ್ಲ ಎಂದಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚು ಜಮೀನು, ಮನೆಯಲ್ಲಿ ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಅಂಥವರ ಬಿಪಿಎಲ್ ಕಾರ್ಡನ್ನು ರದ್ದುಪಡಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಸ್ವಇಚ್ಛೆಯಿಂದ ಈ ಸೌಲಭ್ಯ ಇದ್ದವರು ತಮ್ಮ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ಟಿವಿ ಇಲ್ಲದ ಮನೆ ಇದೆಯೇ ? ಬಿಜೆಪಿಯಿಂದ ‘ಗರೀಬೋಂಕೋ ಹಠಾವೋ’ ಮಾಡುತ್ತಿದ್ದಾರೆ
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm