ಬ್ರೇಕಿಂಗ್ ನ್ಯೂಸ್
20-02-21 04:56 pm Headline Karnataka News Network ಕರ್ನಾಟಕ
ಗದಗ, ಫೆ.20: ಹಿಂದುಗಳೆಲ್ಲರು ತಮ್ಮ ಮನೆ ಎದುರಲ್ಲಿ ಖಡ್ಗ ನೇತಾಡಿಸಿ ಇಡಬೇಕು. ಹರಿತವಾದ ಕತ್ತಿ, ಖಡ್ಗ, ಭರ್ಚಿ, ಕುಡಗೋಲು, ಚಾಕು ಮನೆಯಲ್ಲಿ ನೇತು ಬಿಡ್ರಿ.. ಎದುರಲ್ಲೇ ಕಾಣುವಂತೆ ಇಡಿ, ಕದ್ದು ಮುಚ್ಚಿ ಇಟ್ಟುಕೊಳ್ಳುವುದಲ್ಲ. ಅತ್ಯಾಚಾರಿ, ಮತಾಂತರಿ, ಗೋ ಹಂತಕ, ಭಯೋತ್ಪಾದಕ, ದುರುಳ, ದುಷ್ಟರನ್ನು ಸದೆಬಡಿಯಲು ಈ ಕತ್ತಿ ಮುಂದೆ ಉಪಯೋಗಕ್ಕೆ ಬರಬಹುದು.. ಹೀಗೆಂದು ಶ್ರೀರಾಮ ಸೇನೆ ಸಂಘಟನೆಯ ಸಂಸ್ಥಾಪಕ ವರಿಷ್ಠ ಪ್ರಮೋದ್ ಮುತಾಲಿಕ್ ಹಿಂದುಗಳಿಗೆ ಕರೆ ಕೊಟ್ಟಿದ್ದಾರೆ.
ಗದಗ ಜಿಲ್ಲೆಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಶಿವಾಜಿ ಮಹಾರಾಜರ ಜಯಂತಿ ಸಮಾವೇಶದಲ್ಲಿ ಮುತಾಲಿಕ್ ನಾಲಿಗೆ ಹರಿಯ ಬಿಟ್ಟಿದ್ದಾರೆ. ಶಿವಾಜಿ ಮಹಾರಾಜರ ಫೋಟೋ, ಚರಿತ್ರೆ ಪುಸ್ತಕ, ಖಡ್ಗ ಹಿಂದುಗಳೆಲ್ಲರ ಮನೆಯಲ್ಲೂ ಇಟ್ಟುಕೊಳ್ಳಿ. ಖಡ್ಗ ಕದ್ದುಮುಚ್ಚಿ ಇಡಬೇಡ್ರಿ, ಮನೆಯೊಳಗೆ ಹೋಗುತ್ತಿದ್ದಂತೆ ಕಾಣುವಂತಿಡಿ. ಹರಿತವಾದ ಖತ್ತಿ, ಖಡ್ಗ, ಭಾಚಿ, ಭರ್ಚಿ, ಕುಡಗೋಲು, ಚಾಕು ಮನೆಯಲ್ಲಿ ನೇತು ಬಿಡ್ರಿ ಅಂತ ಪ್ರಚೋದನೆಕಾರಿ ಮಾತುಗಳನ್ನಾಡಿದ್ದಾರೆ.

ಆಯುಧ ಪೂಜೆ ನಮ್ಮ ಸಂಸ್ಕೃತಿ. ಈ ಹಬ್ಬಕ್ಕೆ ಅವಮಾನ ಮಾಡಬೇಡಿ. ಹೇಡಿಗಳಾಗಬೇಡಿ, ದುರ್ಗಾ ಮಾತೆಯ ಹತ್ತು ಕೈಗಳಲ್ಲಿ ಹತ್ತು ಶಸ್ತ್ರಗಳಿವೆ. ದುಷ್ಟ, ನೀಚ, ಭ್ರಷ್ಟ, ಭಯೋತ್ಪಾದಕ, ಗೋ ಹಂತಕ, ಮತಾಂತರರನ್ನು ಕತ್ತರಿಸಲೆಂದೇ ದೇವಿ ಕೈನಲ್ಲಿ ಶಸ್ತ್ರಗಳಿವೆ. ಹಾಗೆಯೇ ಪ್ರತಿ ಹಿಂದುವಿನ ಮನೆಯಲ್ಲೂ ಈ ರೀತಿ ಕತ್ತಿ ಹಿಡಿದುಕೊಳ್ಳಬೇಕು. ಆದರೆ, ಕತ್ತಿಯನ್ನು ಕುಡಿದು ಹೊಡೆದಾಡಲು ಉಪಯೋಗಿಸಬೇಡಿ. ಬದಲಾಗಿ ದೇಶದ, ಗೋ ಮಾತೆ ಹಿತಕ್ಕೋಸ್ಕರ ಇಂದೆಲ್ಲಾ ನಾಳೆ ಬರುವ ಬೀದಿ ಕಾಳಗಕ್ಕೆ ಖಡ್ಗ ಹೊರ ತೆಗೆಯಿರಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಶ್ರೀರಾಮ ನಿಧಿ ಸಂಗ್ರಹಣೆ ವೇಳೆ ಮುಸ್ಲಿಮರು ಬಂದು ರಥಯಾತ್ರೆ ತಡೀತಾರೆ. ಮುಸ್ಲಿಂ ಗೂಂಡಾಗಳು ಹಿಂದೂ ಕಾರ್ಯಕರ್ತರಿಗೆ ಹೊಡೆದು ಗಾಯಮಾಡಿ ರಾಮನ ಭಾವಚಿತ್ರ ಹರಿದು ಹಾಕಿ ಗಲಭೆ ಮಾಡ್ತಾರೆ. ದೆಹಲಿಯಲ್ಲಿ ರಿಂಗೋ ಶರ್ಮಾನ ಕೊಂದ ಮುಸ್ಲಿಮರೇ, ಬೆಂಗಳೂರಿನಲ್ಲಿ ರಾಮನ ರಥಯಾತ್ರೆ ತಡೆದ ಬೊಸುಡಿಕೆಗಳೇ... ಇದು ನಮ್ಮ ಜಾಗ ಅಂತಿರಲ್ಲಾ, ಇದು ನಿಮ್ಮಪ್ಪನ ಜಾಗವೂ ಅಲ್ಲಾ.. ಅಕ್ಬರ್, ಔರಂಗಜೇಬನ ಜಾಗವೂ ಅಲ್ಲಾ... ನಿಮ್ಮ ಜಾಗ ಪಾಕಿಸ್ತಾನ್, ಅಫ್ಘಾನಿಸ್ತಾನ್, ಇರಾನ್, ಇರಾಕ್ ನಲ್ಲಿದೆ ಎಂದು ಹೇಳಿದ ಮುತಾಲಿಕ್, ಶ್ರೀರಾಮ ಸೇನೆಯ ಕಾರ್ಯಕರ್ತರು ಇಂದಲ್ಲಾ ನಾಳೆ ಅದೇ ಬೀದಿಯಲ್ಲಿ ಹೊಕ್ಕು ಮೆರವಣಿಗೆ ಮಾಡುತ್ತೇವೆ ಅಂತ ಆಕ್ರೋಶದ ಮಾತುಗಳನ್ನಾಡಿದರು. ಕ್ರಿಶ್ಚಿಯನ್ನರೇ ಮುಂದೆ ಮತಾಂತರಕ್ಕೆ ಮುಂದಾದ್ರೆ ಒದೆ ಬೀಳುತ್ತವೆ ಹುಷಾರ್..! ಅಂತ ಎಚ್ಚರಿಕೆ ನೀಡಿದರು.
Video:
Hindu Sena Chief Pramod Muthalik warns Hindu homes to Keep Sharped Swords, leathen weapons for safeguard. He gave a provocative speech at Gadag.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm