ಬ್ರೇಕಿಂಗ್ ನ್ಯೂಸ್
17-08-20 06:33 pm Headline Karnataka News Network ಕರ್ನಾಟಕ
ಧಾರವಾಡ, ಆಗಸ್ಟ್ 17: ಕರೊನಾ ಹಾವಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪರಿಸ್ಥಿತಿ ಮಿತಿಮೀರಬಹುದು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ನಿಷೇಧಿಸಿದೆ.
ಇದಕ್ಕೆ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದು, ಸಾರ್ವಜನಿಕ ಉತ್ಸವಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪ್ರತಿಭಟನೆ ನಡೆಸಿರುವ ಅವರು, ‘ಮುಂಬೈನಲ್ಲಿ ಕೂಡ ಕರೊನಾ ಹಾವಳಿ ಹೆಚ್ಚಾಗಿದೆ. ಆದರೆ ಅಲ್ಲಿ ಕೂಡ ಕೆಲವೊಂದು ಷರತ್ತುಗಳನ್ನು ವಿಧಿಸಿ, ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಜೂನ್ನಲ್ಲೆ ಅನುಮತಿ ಕೊಟ್ಟಿದೆ. ಕರ್ನಾಟಕದಲ್ಲಿ ಏಕೆ ಕೊಟ್ಟಿಲ್ಲಿ ಎಂದು ಪ್ರಶ್ನಿಸಿದ್ದಾರೆ.
ಬಾರ್ಗಳಿಗೆ ಕರ್ನಾಟಕದಲ್ಲಿ ಅನುಮತಿ ನೀಡಲಾಗಿದೆ. ಜನರು ಕುಡಿದು ಸತ್ತರೂ ಅಡ್ಡಿಲ್ಲ, ರಾಜ್ಯದ ಬೊಕ್ಕಸಕ್ಕೆ ಹಣ ಆಗಬೇಕೆಂದರೆ ಬಾರ್ಗಳು ತೆರೆಯಬೇಕು ಎಂದು ಅದನ್ನು ತೆರೆಯಲು ಅನುಮತಿ ನೀಡಲಾಗಿದೆ. ಬಾರ್ಗಳಿಗೆ ನೀಡಿರುವ ಅನುಮತಿಯನ್ನು ಗಣೇಶನಿಗೆ ಏಕೆ ಕೊಡುತ್ತಿಲ್ಲ ಎಂದು ಕಿಡಿ ಕಾರಿದರು.
ನಾನು ಜೈಲಿಗೆ ಹೋಗಲು ಸಿದ್ದ, ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾವು ಮತ ಹಾಕಿ ರಾಜ್ಯದಲ್ಲಿ ಸರ್ಕಾರ ತಂದಿದ್ದೇವೆ. ಗಣಪತಿ ಕೂಡಿಸಲು ಅನುಮತಿ ಕೊಡಲಿಲ್ಲ ಎಂದರೆ ಏನರ್ಥ ಎಂದು ಹೇಳಿರುವ ಅವರು, 24 ಗಂಟೆ ಒಳಗೆ ಅನುಮತಿ ನೀಡಲೇಬೇಕು ಎಂದು ಮುತಾಲಿಕ್ ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm