ಬ್ರೇಕಿಂಗ್ ನ್ಯೂಸ್
21-02-21 03:50 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಡೆಕ್ಕನ್ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತದಲ್ಲಿ ಅವ್ಯವಹಾರ, ಒಟ್ಟು ಆರ್ಥಿಕ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅದರ ಎಲ್ಲ ರೀತಿಯ ವಹಿವಾಟುಗಳನ್ನು ನಿರ್ಬಂಧಿಸಿ ಆರ್ ಬಿಐ ಆದೇಶ ಹೊರಡಿಸಿದೆ. ಇದರಿಂದ ಯಾವುದೇ ರೀತಿಯ ಹೊಸ ಸಾಲ ನೀಡುವಂತಿಲ್ಲ ಹಾಗು ಡಿಪಾಸಿಟ್ ಹಣವನ್ನೂ ಪಡೆಯುವ ಹಾಗಿಲ್ಲ.
ಈ ನಡುವೆ, ಇನ್ನು ಆರು ತಿಂಗಳ ಅವಧಿಯಲ್ಲಿ ಗ್ರಾಹಕರು ಕೇವಲ ರೂ.1000 ಮಾತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಆದರೆ, ಈ ಆರು ತಿಂಗಳಲ್ಲಿ ಗ್ರಾಹಕರ ಹಣಕ್ಕೆ ಸಂಪೂರ್ಣ ಬಡ್ಡಿ ಪಾವತಿಸಲಾಗುವುದು ಎಂದು ಆರ್ ಬಿಐ ಸ್ಪಷ್ಟಪಡಿಸಿದೆ. ಇನ್ನೊಂದೆಡೆ ಗ್ರಾಹಕರು ತಮ್ಮ ಸಾಲ ತೀರಿಸಲು ಬ್ಯಾಂಕ್ ನಲ್ಲಿರುವ ಹಣವನ್ನು ಬಳಕೆ ಮಾಡಬಹುದು ಎಂದು RBI ಹೇಳಿದೆ. ಆದರೆ ಇದಕ್ಕೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ.
ಗ್ರಾಹಕರು ಆತಂಕ ಪಡಬೇಕಿಲ್ಲ
ಡೆಕ್ಕನ್ ಸಹಕಾರಿ ಬ್ಯಾಂಕಿನಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ಅಂದರೆ ಫೆಬ್ರುವರಿ 19, 2021 ರಿಂದ ಮುಂದಿನ ಆರು ತಿಂಗಳ ಕಾಲ ಎಲ್ಲ ರೀತಿಯ ವ್ಯವಹಾರಗಳಿಗೆ ತಡೆ ಇರಲಿದೆ. ಆದರೆ ಈ ತಡೆಯ ಅರ್ಥ ಬ್ಯಾಂಕಿನ ಲೈಸನ್ಸ್ ರದ್ದುಗೊಳಿಸಲಾಗಿದೆ ಎಂದು ಭಾವಿಸಬಾರದು ಎಂದು ಆರ್.ಬಿ.ಐ ಸ್ಪಷ್ಟಪಡಿಸಿದೆ. ನಿರ್ಬಂಧಗಳನ್ನು ಪಾಲಿಸಿ ಬ್ಯಾಂಕ್ ಎಂದಿನಂತೆ ತನ್ನ ಕೆಲಸ ಮುಂದುವರೆಸಲಿದೆ. ಈ ಆರು ತಿಂಗಳ ನಿರ್ಬಂಧ ಬಳಿಕ ಪುನಃ ಬ್ಯಾಂಕ್ ಸಮೀಕ್ಷೆ ನಡೆಸಲಾಗುವುದು. ಆದರೆ, ಕೆಲಸದ ಮೇಲಿನ ಬ್ಯಾನ್ ಹೊರತಾಗಿಯೂ ಶೇ.99 ರಷ್ಟು ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು RBI ಹೇಳಿದೆ.
ಇದೆ ವೇಳೆ ಗ್ರಾಹಕರಿಗೆ 'ಉಳಿತಾಯ ವಿಮಾ ಹಾಗೂ ಸಾಲ ಗ್ಯಾರಂಟಿ ನಿಗಮ'ದ ವತಿಯಿಂದ ಉಳಿತಾಯದ ಮೇಲೆ ಸಿಗುವ ವಿಮಾ ಲಾಭ ನೀಡಲಾಗುವುದು. ಈ ವಿಮೆಯ ಅಡಿ ಬ್ಯಾಂಕ್ ನಲ್ಲಿ ಗ್ರಾಹಕರು ಮಾಡಿರುವ ಉಳಿತಾಯದ ಮೇಲೆ 5 ಲಕ್ಷ ರೂ.ವಿಮಾ ಕವರೇಜ್ ಸಿಗಲಿದೆ.
The Reserve Bank of India (RBI) has imposed a withdrawal cap of Rs 1,000 on customers of the Deccan Urban Co-operative Bank and has barred the lender from granting new loans or accepting deposits due to its liquidity position.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm