ಬ್ರೇಕಿಂಗ್ ನ್ಯೂಸ್
23-02-21 11:40 am Headline Karnataka News Network ಕರ್ನಾಟಕ
ಕಾರವಾರ, ಫೆ.23: ಪಂಚಮಸಾಲಿಗಳ ಒತ್ತಡಕ್ಕೆ ಮಣಿದು ಸರಕಾರ ಮೀಸಲಾತಿ ನೀಡಿದಲ್ಲಿ ಪರಿಣಾಮ ನೆಟ್ಟಗಿರಲ್ಲ. ಅದರ ವಿರುದ್ಧ ನಾನೇ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ ಎಂದು ಸರ್ಕಾರದ ವಿರುದ್ಧ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗುಡುಗಿದ್ದಾರೆ.
ಭಟ್ಕಳದಲ್ಲಿ ಪಂಚಮಸಾಲಿ ಮೀಸಲಾತಿ ಆಗ್ರಹ ವಿರೋಧಿಸಿ ಉಜಿರೆ ಶ್ರೀರಾಮ ಪೀಠದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆದಿದ್ದು ರಾಜಕಾರಣಿಗಳ ರಾಜಕೀಯ ಲೇಪಿತ ಹೋರಾಟದ ಬಗ್ಗೆ ಕಿಡಿಕಾರಿದ್ದಾರೆ.
ಸಿಎಂ ಯಡಿಯೂರಪ್ಪ ತುಂಬಾ ಒಳ್ಳೆಯವರು. ಅವರನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರಕಾರದ ಹಿರಿಯ ಮಂತ್ರಿಗಳೇ ಮಾಡುತ್ತಿದ್ದಾರೆ. ಪ್ರಬಲ ಸಮುದಾಯದ ಮಂತ್ರಿಗಳು ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದಾರೆ. ಸಿಎಂ ಅವರನ್ನ ನಿದ್ರೆ ಮಾಡದಂತೆ ಮಾಡಿದ್ದಾರೆ. ಹಾಗೆಂದು ಬ್ರಹ್ಮಾನಂದ ಯಾವುದೇ ಜಾತಿಯ ಪರವಾಗಿ ಈ ಸಮಾವೇಶಕ್ಕೆ ಬಂದಿಲ್ಲ. 360 ಹಿಂದುಳಿದ ವರ್ಗದ ಜಾತಿಗಳ ಕಣ್ಣೀರು ಒರೆಸುವ ಉದ್ದೇಶದಿಂದ ವೇದಿಕೆಯಲ್ಲಿ ಬಂದು ಕುಳಿತಿದ್ದೇನೆ ಎಂದು ಹೇಳಿದರು.

ಜಾತಿಯ ಬಲವಿದೆ ಎಂದು ರಾಜ್ಯ ಸರ್ಕಾರ ದುಡುಕಿದ್ರೆ ಅದರ ಪರಿಣಾಮ ಚೆನ್ನಾಗಿರಲ್ಲ. ಕುರುಕ್ಷೇತ್ರದಲ್ಲಿ ಕೌರವರ ವಿರುದ್ಧ ಪಾಂಡವರು ಗೆದ್ದಿದ್ದನ್ನ ಸರ್ಕಾರ ನೆನಪಿಡಲಿ. ದುರ್ಬಲ, ಹಿಂದುಳಿದವರು ಓಟಿನ ಮೂಲಕ ಮೇಲ್ವರ್ಗದವರಿಗೆ ಲಾಠಿ ಕೊಟ್ಟು ಬಡಿಸಿಕೊಳ್ಳುತ್ತಿದ್ದೀರಿ. 2- 3 ಶೇ. ಇರೋ ಮೇಲ್ವರ್ಗದ ನಾಯಕರು ಬುದ್ಧಿವಂತಿಕೆಯಿಂದ ನಿಮ್ಮ ಬೆನ್ನು ಸವರಿ ಮತ್ತೆ ಮೇಲೆ ಸವಾರಿ ಮಾಡ್ತಿದ್ದಾರೆ. ಇದು ತುಂಬಾ ಬೇಸರ ತರುವ ವಿಷಯವಾಗಿದೆ. ರಾಜ್ಯವನ್ನು ಆಳುವ ಜನಪ್ರತಿನಿಧಿಗಳಿಗೆ ಸವಾಲು ಹಾಕ್ತಿದ್ದೇನೆ, ನಿಮಗೆ ಅಧಿಕಾರ ಕೊಟ್ಟವರ್ಯಾರು ? ಸಂವಿಧಾನ ಅಂದ್ರೆ ಅಜ್ಜನಿಂದ ವಂಶ ಪಾರಂಪರ್ಯವಾಗಿ ಬಂದ ಆಸ್ತಿಯಲ್ಲ, ನಿಮಗೆ ಪಾಲು ಮಾಡಿ ಕೊಡಲು. ಪಂಚಮಸಾಲಿಗಳನ್ನ 2ಎ ವಿಭಾಗಕ್ಕೆ ಸೇರಿಸಿದ್ದೆ ಆದಲ್ಲಿ ನಾನೇ ಸುಪ್ರೀಮ್ ಕೋರ್ಟ್ ಮೆಟ್ಟಿಲು ಏರುತ್ತೇನೆ ಎಂದ ಬ್ರಹ್ಮಾನಂದ ಸ್ವಾಮೀಜಿ ಗುಡುಗಿದ್ದಾರೆ.
Kawar Panchamasali Seer warms cm demanding reservations for the community and its inclusion under the Category 2A in the state quota, warning that if the BS Yediyurappa-led government fails to do so they will have to see a big consequences.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm