ಬ್ರೇಕಿಂಗ್ ನ್ಯೂಸ್
23-02-21 01:51 pm Headline Karnataka News Network ಕರ್ನಾಟಕ
ನವದೆಹಲಿ, ಫೆ.23 : ಸರಕಾರದಿಂದ ಅನುಮತಿ ಪಡೆದಿರುವ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಮಾತ್ರ ಸ್ಫೋಟಕ ಸಾಮಗ್ರಿಗಳನ್ನು ಬಳಕೆ ಮಾಡುವಂತಾಗಲು ಹೊಸ ಕಾನೂನು ಜಾರಿ ಮಾಡಲಾಗವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸಚಿವರು ನವದೆಹಲಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಘಟನೆಯ ಬಗ್ಗೆ ಮಾಧ್ಯದವರು ಪ್ರಶ್ನೆ ಮಾಡಿದಾಗ, ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದ ಇಂಥ ಅವಘಡಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು ಸದ್ಯದಲ್ಲೇ ಹೊಸ ಕಾನೂನು ಜಾರಿ ಮಾಡಲಾಗುವುದು. ಸರ್ಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ಸಾಮಗ್ರಿ ಬಳಸುವ ಕಾನೂನು ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಈ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ರೀತಿಯ ಅವಘಡಗಳು ಗಣಿ ಕಾರ್ಮಿಕರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಜಿಲೆಟಿನ್ ಕಡ್ಡಿ ಸಹಿತ ಸ್ಫೋಟಕಗಳು ಮತ್ತು ಇತರ ಸೋಟಕ ಸಾಮಗ್ರಿಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ. ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಹಿರೇನಾಗವಲ್ಲಿ ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಶಿವಮೊಗ್ಗ ದುರಂತ ಮಾಸುವ ಮುನ್ನವೇ ಮತ್ತೊಂದು ಗಣಿ ಸ್ಫೋಟ! ಆರು ಸಾವು, ಸಚಿವ ಸುಧಾಕರ್ ವಿರುದ್ಧ ಆಕ್ರೋಶ
ಸ್ಫೋಟ ಪ್ರಕರಣ ; ಮುಖ್ಯಮಂತ್ರಿ ದುರಾಡಳಿತಕ್ಕೆ ಅಮಾಯಕರು ಬಲಿ : ಸಿದ್ದರಾಮಯ್ಯ ಆಕ್ರೋಶ
6 Dead In Quarry Blast In Karnataka's Chikkaballapur Minister of Mines and Geology Murugesh Nirani brings new law.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm