ಬ್ರೇಕಿಂಗ್ ನ್ಯೂಸ್
23-02-21 01:51 pm Headline Karnataka News Network ಕರ್ನಾಟಕ
ನವದೆಹಲಿ, ಫೆ.23 : ಸರಕಾರದಿಂದ ಅನುಮತಿ ಪಡೆದಿರುವ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಮಾತ್ರ ಸ್ಫೋಟಕ ಸಾಮಗ್ರಿಗಳನ್ನು ಬಳಕೆ ಮಾಡುವಂತಾಗಲು ಹೊಸ ಕಾನೂನು ಜಾರಿ ಮಾಡಲಾಗವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸಚಿವರು ನವದೆಹಲಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಘಟನೆಯ ಬಗ್ಗೆ ಮಾಧ್ಯದವರು ಪ್ರಶ್ನೆ ಮಾಡಿದಾಗ, ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದ ಇಂಥ ಅವಘಡಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು ಸದ್ಯದಲ್ಲೇ ಹೊಸ ಕಾನೂನು ಜಾರಿ ಮಾಡಲಾಗುವುದು. ಸರ್ಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ಸಾಮಗ್ರಿ ಬಳಸುವ ಕಾನೂನು ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಈ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ರೀತಿಯ ಅವಘಡಗಳು ಗಣಿ ಕಾರ್ಮಿಕರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಜಿಲೆಟಿನ್ ಕಡ್ಡಿ ಸಹಿತ ಸ್ಫೋಟಕಗಳು ಮತ್ತು ಇತರ ಸೋಟಕ ಸಾಮಗ್ರಿಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ. ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಹಿರೇನಾಗವಲ್ಲಿ ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಶಿವಮೊಗ್ಗ ದುರಂತ ಮಾಸುವ ಮುನ್ನವೇ ಮತ್ತೊಂದು ಗಣಿ ಸ್ಫೋಟ! ಆರು ಸಾವು, ಸಚಿವ ಸುಧಾಕರ್ ವಿರುದ್ಧ ಆಕ್ರೋಶ
ಸ್ಫೋಟ ಪ್ರಕರಣ ; ಮುಖ್ಯಮಂತ್ರಿ ದುರಾಡಳಿತಕ್ಕೆ ಅಮಾಯಕರು ಬಲಿ : ಸಿದ್ದರಾಮಯ್ಯ ಆಕ್ರೋಶ
6 Dead In Quarry Blast In Karnataka's Chikkaballapur Minister of Mines and Geology Murugesh Nirani brings new law.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm