ಬ್ರೇಕಿಂಗ್ ನ್ಯೂಸ್
27-02-21 11:22 pm Bnagalore correspondent ಕರ್ನಾಟಕ
ಬೆಂಗಳೂರು, ಫೆ 27: ಕೊವಿಡ್ 19 ಕಾರಣದಿಂದ ಸ್ಥಗಿತಗೊಂಡಿದ್ದ ಗೋಲ್ಡನ್ ಚಾರಿಯೆಟ್ ಐಷಾರಾಮಿ ಪ್ರವಾಸಿ ರೈಲು ಸಂಚಾರ ಮಾರ್ಚ್ 14ರಿಂದ ಪುನರಾರಂಭಗೊಳ್ಳಲಿದೆ. ಮಾರ್ಚ್ 14ಮತ್ತು 21ರಿಂದ ಸುಂದರತಾಣಗಳ ಪ್ರವಾಸ ಮಾಡಲು http://goldenchariot.org ವೆಬ್ಸೈಟ್ಗೆ ಹೋಗಿ ಟಿಕೆಟ್ ಬುಕ್ ಮಾಡಬಹುದು.
ಈ ಬಾರಿ ಗೋಲ್ಡನ್ ಚಾರಿಯೆಟ್ ರೈಲಿನಲ್ಲಿ ಪ್ರವಾಸ ಮಾಡುವವರಿಗೆ ಬೆಂಗಳೂರು-ಚಂಡೀಗಢ್ ವಿಮಾನಯಾನಕ್ಕೆ ಉಚಿತವಾಗಿ ಟಿಕೆಟ್ ಕೂಡ ನೀಡಲಾಗುವುದು.
ಭಾನುವಾರದಿಂದ ಗೋಲ್ಡನ್ ಚಾರಿಯಟ್ ಪ್ರವಾಸಿ ರೈಲುಗಳ ಸಂಚಾರ ಪ್ರಾರಂಭವಾಗಲಿದ್ದು, ಒಟ್ಟು ಮೂರು ಪ್ಯಾಕೇಜ್ ಇರಲಿದೆ. ಯಾವ್ಯಾವ ಪ್ಯಾಕೇಜ್ನಲ್ಲಿ ಎಲ್ಲೆಲ್ಲಿಗೆ ಟೂರ್ ಎಂಬ ಮಾಹಿತಿ ಇಲ್ಲಿದೆ ನೋಡಿ..

ಪ್ರೈಡ್ ಆಫ್ ಕರ್ನಾಟಕ ಪ್ಯಾಕೇಜ್:
ಮೊದಲ ದಿನ ಅಂದರೆ ಭಾನುವಾರ ಬೆಳಗ್ಗೆ ಬೆಂಗಳೂರು ಯಶವಂತಪುರ ರೈಲ್ವೆ ನಿಲ್ದಾಣದಿಂದ ಗೋಲ್ಡನ್ ಚಾರಿಯೆಟ್ ಹೊರಡಲಿದ್ದು, ಬಂಡೀಪುರಕ್ಕೆ ತೆರಳಲಿದೆ. ಸಂಜೆ 4.30ರಿಂದ 6.30ರವರೆಗೆ ಅಲ್ಲಿ ಸಫಾರಿ ಮುಗಿದ ಬಳಿಕ ಡಿನ್ನರ್. ಅಲ್ಲಿಂದ ಹೊರಟ ರೈಲು ಮಧ್ಯರಾತ್ರಿ ಹೊತ್ತಿಗೆ ಮೈಸೂರು ತಲುಪಲಿದೆ. ಅದಾದ ಬಳಿಕ ಸೋಮವಾರ ಬೆಳಗ್ಗಿನ ತಿಂಡಿಯ ಬಳಿಕ ಪ್ರವಾಸಿಗರಿಗೆ ಮೈಸೂರು ಅರಮನೆ ದರ್ಶನ ಮಾಡಿಸಲಿದ್ದು, ಅಲ್ಲಿಂದ ಸಂಜೆ ಹೊತ್ತಿಗೆ ಶ್ರೀರಂಗಪಟ್ಟಣಕ್ಕೆ ತೆರಳಲಿದೆ.
ಮೂರನೇ ದಿನ ಮಂಗಳವಾರ ಹಳೇಬೀಡು, ಬುಧವಾರ ಹಂಪಿ, 5ನೇ ದಿನ ಬಾದಾಮಿ ಗುಹೆಗಳಿಗೆ ಪ್ರಯಾಣ ಮಾಡಲಿದ್ದು, ಪಟ್ಟದಕಲ್ಲು, ಐಹೊಳೆಯನ್ನು ವೀಕ್ಷಿಸಬಹುದಾಗಿದೆ. ಹಾಗೇ 6ನೇ ದಿನ ಅಂದರೆ ಶುಕ್ರವಾರ ರೈಲು ಗೋವಾಕ್ಕೆ ಸಾಗಲಿದೆ. ಅಲ್ಲಿ ಉತ್ತರ ಗೋವಾದ ಚರ್ಚ್ಗಳು, ಮ್ಯೂಸಿಯಂಗಳು ಪ್ರವಾಸಿಗರ ವೀಕ್ಷಣಾ ಸ್ಥಳಗಳಾಗಿದ್ದು ಅಲ್ಲಿಂದ ಏಳನೇ ದಿನ ಅಂದರೆ ಶನಿವಾರ ಬೆಂಗಳೂರಿಗೆ ಹಿಂದಿರುಗಲಿದೆ.

ಜ್ಯುವೆಲ್ಸ್ ಆಫ್ ಸೌತ್:
ಭಾನುವಾರ ಬೆಂಗಳೂರಿನಿಂದ ಹೊರಟ ರೈಲು ಮೈಸೂರಿಗೆ ತಲುಪಲಿದೆ. ಅಲ್ಲಿಂದ ಸೋಮವಾರ ಹಂಪಿ, ಮಂಗಳವಾರ ತಮಿಳುನಾಡಿನ ಮಹಾಬಲಿಪುರಂ, ಬುಧವಾರ ತಂಜಾವೂರು, ಚೆಟ್ಟಿನಾಡ್, ಗುರುವಾರ ಕೊಚ್ಚಿನ್, ಶುಕ್ರವಾರ ಕುಮಾರ್ಕೋಮ್ಗೆ ತೆರಳಿ, ಶನಿವಾರ ಬೆಂಗಳೂರಿಗೆ ವಾಪಸ್ ಬರಲಿದೆ.

ಗ್ಲಿಮ್ಸಸ್ ಆಫ್ ಕರ್ನಾಟಕ:
ಇದು 3ರಾತ್ರಿ/4 ಹಗಲುಗಳ ಪ್ರಯಾಣ. ಇದರಲ್ಲಿ ಮೊದಲ ದಿನ ಅಂದರೆ ಭಾನುವಾರ ಬೆಂಗಳೂರಿನಿಂದ ಹೊರಟ ರೈಲು ಬಂಡೀಪುರಕ್ಕೆ ತೆರಳಲಿದೆ. ಸೋಮವಾರ ಮೈಸೂರು, ಮಂಗಳವಾರ ಹಂಪಿಗೆ ಹೋಗಿ ಅಲ್ಲಿಂದ ಬುಧವಾರ ವಾಪಸ್ ಬೆಂಗಳೂರಿಗೆ ಬರಲಿದೆ. ಗೋಲ್ಡನ್ ಚಾರಿಯೆಟ್ ರೈಲು ರಾಜ್ಯದಲ್ಲಿ ಶುರುವಾಗಿದ್ದು 2008ರಲ್ಲಿ. ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಪ್ರಾರಂಭ ಮಾಡಲಾಗಿದ್ದು, ಇದರ ಉಸ್ತುವಾರಿಯನ್ನು ರೈಲ್ವೆ ಕೇಟರಿಂಗ್ ಆ್ಯಂಡ್ ಟೂರಿಸಂ ವಹಿಸಿಕೊಂಡಿದೆ.
Bangalore Golden Chariot train that had stopped it's services due to covid lockdown has now resumed its services with best package tour. Book your tickets online now!
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm