ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm