ಬ್ರೇಕಿಂಗ್ ನ್ಯೂಸ್
03-03-21 12:27 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 3: ಸಾಹುಕಾರ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಪೊಲೀಸರು ಇನ್ನೂ ಎಫ್ಐಆರ್ ದಾಖಲಿಸಿಲ್ಲ.
ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಈಗಾಗಲೇ ದೂರು ಸಲ್ಲಿಕೆಯಾಗಿದೆ. ಕೆಪಿಟಿಸಿಎಲ್ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ಥ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿರುವುದಾಗಿ ದೂರು ಕೊಡಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಆದರೆ ಪೊಲೀಸರು ಇನ್ನೂ ಎಫ್ಐಆರ್ ದಾಖಲಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಪಿ ಅನುಚೇತ್, ಸಂತ್ರಸ್ತೆಯ ಹೇಳಿಕೆ ಪಡೆದ ಮೇಲಷ್ಟೇ ಎಫ್ಐಆರ್ ದಾಖಲಿಸುವುದಾಗಿ ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಭೇಟಿ ಬಳಿಕ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಇದು ತುಂಬಾ ಸೂಕ್ಷ್ಮವಾದ ವಿಚಾರ ಆಗಿರುವ ಕಾರಣ ಬಹಿರಂಗಪಡಿಸಲು ಸಾಧ್ಯವಿಲ್ಲ. ಸಂತ್ರಸ್ತೆಗೆ ಭಾರೀ ಪ್ರಮಾಣದಲ್ಲಿ ಬೆದರಿಕೆ ಕರೆಗಳು ಬರುತ್ತಿವೆ. ಒಂದೆರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಬಳಿಕ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ. ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ದೂರು ನೀಡಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ಹೇಳಿದ್ದರು.
ಕುಟುಂಬದ ಸದಸ್ಯರೊಬ್ಬರು ಆಗಮಿಸಿ ಸೋಮವಾರ ನನಗೆ ಸಿಡಿ ನೀಡಿದರು. ಕಿರು ಚಿತ್ರ ನಿರ್ಮಾಣಕ್ಕೆಂದು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದಾಗ ಕೆಪಿಟಿಸಿಎಲ್ನಲ್ಲಿ ಕೆಲಸ ನೀಡುವುದಾಗಿ ಹೇಳಿಕೆ ನೀಡಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಹಲವು ಪ್ರಕರಣಗಳಲ್ಲಿ ನನಗೆ ತುಂಬಾ ನೋವು ಕೊಟ್ಟಿದ್ದಾರೆ. ನನ್ನಿಂದ ಅವರ ವಿರುದ್ಧ ಹೋರಾಟ ಮಾಡಲು ಆಗುತ್ತಿಲ್ಲ. ನ್ಯಾಯ ಕೊಡಿಸಿ ಎಂದು ನನ್ನ ಬಳಿ ಮನವಿ ಮಾಡಿದರು. ನಾನು ನಮ್ಮ ವಕೀಲರ ಜೊತೆ ಚರ್ಚೆ ನಡೆಸಿ, ಇದೀಗ ದೂರು ನೀಡಲು ಬಂದಿದ್ದೇನೆ ಎಂದು ದಿನೇಶ್ ತಿಳಿಸಿದ್ದರು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
Minister Ramesh Jarkiholi caught in sex CD scandal yet FIR has not been registered by the Police as the Victim girl hasn't approached the police station to file the case.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm