ಬ್ರೇಕಿಂಗ್ ನ್ಯೂಸ್
03-03-21 12:27 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 3: ಸಾಹುಕಾರ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಪೊಲೀಸರು ಇನ್ನೂ ಎಫ್ಐಆರ್ ದಾಖಲಿಸಿಲ್ಲ.
ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಈಗಾಗಲೇ ದೂರು ಸಲ್ಲಿಕೆಯಾಗಿದೆ. ಕೆಪಿಟಿಸಿಎಲ್ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ಥ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿರುವುದಾಗಿ ದೂರು ಕೊಡಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಆದರೆ ಪೊಲೀಸರು ಇನ್ನೂ ಎಫ್ಐಆರ್ ದಾಖಲಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಪಿ ಅನುಚೇತ್, ಸಂತ್ರಸ್ತೆಯ ಹೇಳಿಕೆ ಪಡೆದ ಮೇಲಷ್ಟೇ ಎಫ್ಐಆರ್ ದಾಖಲಿಸುವುದಾಗಿ ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಭೇಟಿ ಬಳಿಕ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಇದು ತುಂಬಾ ಸೂಕ್ಷ್ಮವಾದ ವಿಚಾರ ಆಗಿರುವ ಕಾರಣ ಬಹಿರಂಗಪಡಿಸಲು ಸಾಧ್ಯವಿಲ್ಲ. ಸಂತ್ರಸ್ತೆಗೆ ಭಾರೀ ಪ್ರಮಾಣದಲ್ಲಿ ಬೆದರಿಕೆ ಕರೆಗಳು ಬರುತ್ತಿವೆ. ಒಂದೆರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಬಳಿಕ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ. ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ದೂರು ನೀಡಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ಹೇಳಿದ್ದರು.
ಕುಟುಂಬದ ಸದಸ್ಯರೊಬ್ಬರು ಆಗಮಿಸಿ ಸೋಮವಾರ ನನಗೆ ಸಿಡಿ ನೀಡಿದರು. ಕಿರು ಚಿತ್ರ ನಿರ್ಮಾಣಕ್ಕೆಂದು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದಾಗ ಕೆಪಿಟಿಸಿಎಲ್ನಲ್ಲಿ ಕೆಲಸ ನೀಡುವುದಾಗಿ ಹೇಳಿಕೆ ನೀಡಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಹಲವು ಪ್ರಕರಣಗಳಲ್ಲಿ ನನಗೆ ತುಂಬಾ ನೋವು ಕೊಟ್ಟಿದ್ದಾರೆ. ನನ್ನಿಂದ ಅವರ ವಿರುದ್ಧ ಹೋರಾಟ ಮಾಡಲು ಆಗುತ್ತಿಲ್ಲ. ನ್ಯಾಯ ಕೊಡಿಸಿ ಎಂದು ನನ್ನ ಬಳಿ ಮನವಿ ಮಾಡಿದರು. ನಾನು ನಮ್ಮ ವಕೀಲರ ಜೊತೆ ಚರ್ಚೆ ನಡೆಸಿ, ಇದೀಗ ದೂರು ನೀಡಲು ಬಂದಿದ್ದೇನೆ ಎಂದು ದಿನೇಶ್ ತಿಳಿಸಿದ್ದರು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
Minister Ramesh Jarkiholi caught in sex CD scandal yet FIR has not been registered by the Police as the Victim girl hasn't approached the police station to file the case.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm