ಬ್ರೇಕಿಂಗ್ ನ್ಯೂಸ್
03-03-21 12:27 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 3: ಸಾಹುಕಾರ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಪೊಲೀಸರು ಇನ್ನೂ ಎಫ್ಐಆರ್ ದಾಖಲಿಸಿಲ್ಲ.
ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಈಗಾಗಲೇ ದೂರು ಸಲ್ಲಿಕೆಯಾಗಿದೆ. ಕೆಪಿಟಿಸಿಎಲ್ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ಥ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿರುವುದಾಗಿ ದೂರು ಕೊಡಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಆದರೆ ಪೊಲೀಸರು ಇನ್ನೂ ಎಫ್ಐಆರ್ ದಾಖಲಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಪಿ ಅನುಚೇತ್, ಸಂತ್ರಸ್ತೆಯ ಹೇಳಿಕೆ ಪಡೆದ ಮೇಲಷ್ಟೇ ಎಫ್ಐಆರ್ ದಾಖಲಿಸುವುದಾಗಿ ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಭೇಟಿ ಬಳಿಕ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಇದು ತುಂಬಾ ಸೂಕ್ಷ್ಮವಾದ ವಿಚಾರ ಆಗಿರುವ ಕಾರಣ ಬಹಿರಂಗಪಡಿಸಲು ಸಾಧ್ಯವಿಲ್ಲ. ಸಂತ್ರಸ್ತೆಗೆ ಭಾರೀ ಪ್ರಮಾಣದಲ್ಲಿ ಬೆದರಿಕೆ ಕರೆಗಳು ಬರುತ್ತಿವೆ. ಒಂದೆರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಬಳಿಕ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ. ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ದೂರು ನೀಡಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ಹೇಳಿದ್ದರು.
ಕುಟುಂಬದ ಸದಸ್ಯರೊಬ್ಬರು ಆಗಮಿಸಿ ಸೋಮವಾರ ನನಗೆ ಸಿಡಿ ನೀಡಿದರು. ಕಿರು ಚಿತ್ರ ನಿರ್ಮಾಣಕ್ಕೆಂದು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದಾಗ ಕೆಪಿಟಿಸಿಎಲ್ನಲ್ಲಿ ಕೆಲಸ ನೀಡುವುದಾಗಿ ಹೇಳಿಕೆ ನೀಡಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಹಲವು ಪ್ರಕರಣಗಳಲ್ಲಿ ನನಗೆ ತುಂಬಾ ನೋವು ಕೊಟ್ಟಿದ್ದಾರೆ. ನನ್ನಿಂದ ಅವರ ವಿರುದ್ಧ ಹೋರಾಟ ಮಾಡಲು ಆಗುತ್ತಿಲ್ಲ. ನ್ಯಾಯ ಕೊಡಿಸಿ ಎಂದು ನನ್ನ ಬಳಿ ಮನವಿ ಮಾಡಿದರು. ನಾನು ನಮ್ಮ ವಕೀಲರ ಜೊತೆ ಚರ್ಚೆ ನಡೆಸಿ, ಇದೀಗ ದೂರು ನೀಡಲು ಬಂದಿದ್ದೇನೆ ಎಂದು ದಿನೇಶ್ ತಿಳಿಸಿದ್ದರು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
Minister Ramesh Jarkiholi caught in sex CD scandal yet FIR has not been registered by the Police as the Victim girl hasn't approached the police station to file the case.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am