ಬ್ರೇಕಿಂಗ್ ನ್ಯೂಸ್
03-03-21 01:23 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.3: ಅಶ್ಲೀಲ ಸಿಡಿ ಜಾಲದಲ್ಲಿ ಸಿಕ್ಕಿಬಿದ್ದ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮುಜುಗರ ತಪ್ಪಿಸಲು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜಿನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನೆ ಮಾಡಿದ್ದಾಗಿ ಜಾರಕಿಹೊಳಿ ತಿಳಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಮತ್ತು ರಾಜ್ಯದಲ್ಲಿ ಉಪ ಚುನಾವಣೆ ಇರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂಬ ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದ್ದಾರೆಂದು ತಿಳಿದುಬಂದಿದೆ.

ಹೈಕಮಾಂಡ್ ತೀವ್ರ ಗರಂ !
ಸಿಡಿ ವಿಚಾರದಲ್ಲಿ ಶಿಸ್ತಿನ ಪಕ್ಷ ಎಂಬ ಹೆಸರಿನ ಬಿಜೆಪಿಗೆ ಭಾರೀ ಮುಜುಗರ ಆಗಿತ್ತು. ಇದರಿಂದ ತೀವ್ರ ಸಿಡಿಮಿಡಿ ಆಗಿದ್ದ ಬಿಜೆಪಿ ಹೈಕಮಾಂಡ್, ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ. ಉಳಿದಿದ್ದು ಆಮೇಲೆ ನೋಡೋಣ ಎನ್ನುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ರವಾನಿಸಿದ್ದರು ಎನ್ನಲಾಗಿದೆ. ಇದರಿಂದ ಇಕ್ಕಟ್ಟಿಗೆ ಬಿದ್ದ ಯಡಿಯೂರಪ್ಪ, ಜಾರಕಿಹೊಳಿ ಬಳಿ ರಾಜಿನಾಮೆ ಕೇಳಿದ್ದರು.

ರಾಜಿನಾಮೆ ನೀಡಲ್ಲ ಎಂದಿದ್ದ ಜಾರಕಿಹೊಳಿ !
ಸಿಡಿ ಪ್ರಕರಣ ಹೊರಬಿದ್ದ ಬಳಿಕ ಫೋನ್ ಸ್ವಿಚ್ ಆಫ್ ಮಾಡಿ ನಿಗೂಢ ಜಾಗಕ್ಕೆ ತೆರಳಿದ್ದ ಸಚಿವ ಜಾರಕಿಹೊಳಿ, ರಾತ್ರಿ ವೇಳೆ ಮಾಧ್ಯಮದ ಮುಂದೆ ಬಂದು ನಾನು ತಪ್ಪು ಮಾಡಿಲ್ಲ. ಯುವತಿ ಬಗ್ಗೆ ಗೊತ್ತಿಲ್ಲ. ರಾಜಿನಾಮೆ ನೀಡಲ್ಲ. ತನಿಖೆ ಆಗಲಿ, ಆಮೇಲೆ ನೋಡೋಣ ಎಂದಿದ್ದರು. ಆದರೆ, ಜಾರಕಿಹೊಳಿ ಮಾತು ಸಂಚಲನ ಎಬ್ಬಿಸಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ತೀವ್ರ ಟೀಕೆಗೆ ಕಾರಣವಾಗಿತ್ತು.
ಸಿಡಿಯಲ್ಲಿ ಸಿಕ್ಕಿಬಿದ್ದ ಬೆಳಗಾವಿ ಸಾಹುಕಾರ್ !! ಬಿಜೆಪಿ ಪಾಲಿಗೆ ಜಾರಕಿಹೊಳಿ ಬಿಸಿತುಪ್ಪ !!
ರಮೇಶ್ ಜಾರಕಿಹೊಳಿ ರಾಸಲೀಲೆ ಔಟ್ ; ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್ಐಆರ್
ಜಾರಕಿಹೊಳಿ ಮಾನ-ಮರ್ಯಾದೆ ಇದ್ದರೆ ತಕ್ಷಣ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಿ ; ಸಿದ್ದರಾಮಯ್ಯ ಅವಾಜ್
Karnataka Water Resources minister Ramesh Jarkiholi resigns from the minister post by issuing a letter to CM BSY. The minister was in controversy after a CD allegedly showing him in a compromising position with a woman emerged on Tuesday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm