ಬ್ರೇಕಿಂಗ್ ನ್ಯೂಸ್
06-03-21 03:43 pm Headline Karnataka News Network ಕರ್ನಾಟಕ
ಮೈಸೂರು, ಮಾ.6: ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಿಂದ ದೂರವಿದ್ದುಕೊಂಡು ಕಾಡಿನಲ್ಲಿರುವ ದೇವರನ್ನು ಪೂಜಿಸುತ್ತಾರೆ. ಅವರಲ್ಲಿ ವಿಶಿಷ್ಟ ಸಂಸ್ಕೃತಿ, ಆಚರಣೆ ಇದೆ. ಹಾಗೆಂದು, ಅಂಥ ವಿಶಿಷ್ಟ ಸಂಸ್ಕೃತಿಯವರು ಕೂಡ ಏಸುವನ್ನು ದೇವರೆಂದು ಒಪ್ಪಿಕೊಳ್ಳುವ ವಿವೇಚನೆ ಪಡೆದಿದ್ದಾರೆ ಅಂದ್ರೆ ಅವರಿಗೆ ಪರಿಶಿಷ್ಟರಿಗೆ ನೀಡಬೇಕಾದ ಮೀಸಲಾತಿ ನೀಡಬೇಕಿಲ್ಲ ಎಂದು ಮೈಸೂರು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದರು, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ತಡೆಯಬೇಕೆಂಬ ನಿಟ್ಟಿನಲ್ಲಿ ನಾನು ಹಾಗೆ ಹೇಳಿದ್ದೇನೆ. ಜನಪದರು, ಬುಡಕಟ್ಟು ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬುಡಕಟ್ಟಿನವರು ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ನೀಡಬಾರದು ಎಂದರು.
ಜಾತಿ ವ್ಯವಸ್ಥೆ ಇರುವುದು ಹಿಂದು ಧರ್ಮದಲ್ಲಿ ಮಾತ್ರ. ಜಾತಿಯಲ್ಲಿ ಹಿಂದುಳಿದಿದ್ದಾರೆ ಎಂದು ಅವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಲಾಗಿದೆ. ಈಗ ಅವರನ್ನು ದಲಿತ ಕ್ರೈಸ್ತರು ಎಂಬ ನೆಲೆಯಲ್ಲಿ ಮೀಸಲಾತಿ ಕೊಡಬೇಕು ಅಂದರೆ ಅದು ಹೇಗೆ ಸಾಧ್ಯ. ಕ್ರಿಶ್ಚಿಯನ್ ಮತ್ತು ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ ಎಂಬುದನ್ನು ಅವರೇ ಹೇಳುತ್ತಾರೆ. ಈ ಮಾತಿಗೆ ವಿವೇಚನೆ ಇದೆಯೇ ಎಂಬುದನ್ನು ಕೇಳಿದ್ದೇನೆ. ಈ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಸಂಸದರು, ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬುಡಕಟ್ಟು ಜನಾಂಗಗಳಿಗೆ ನೀಡಬಾರದು ಎಂದು ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸಂಸದ ಪ್ರತಾಪಸಿಂಹ ಕ್ರಿಸ್ತಿಯನ್ನರ ಬಗ್ಗೆ ಅವಹೇಳನ ಮಾಡಿದ್ದಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm