ಬ್ರೇಕಿಂಗ್ ನ್ಯೂಸ್
06-03-21 03:43 pm Headline Karnataka News Network ಕರ್ನಾಟಕ
ಮೈಸೂರು, ಮಾ.6: ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಿಂದ ದೂರವಿದ್ದುಕೊಂಡು ಕಾಡಿನಲ್ಲಿರುವ ದೇವರನ್ನು ಪೂಜಿಸುತ್ತಾರೆ. ಅವರಲ್ಲಿ ವಿಶಿಷ್ಟ ಸಂಸ್ಕೃತಿ, ಆಚರಣೆ ಇದೆ. ಹಾಗೆಂದು, ಅಂಥ ವಿಶಿಷ್ಟ ಸಂಸ್ಕೃತಿಯವರು ಕೂಡ ಏಸುವನ್ನು ದೇವರೆಂದು ಒಪ್ಪಿಕೊಳ್ಳುವ ವಿವೇಚನೆ ಪಡೆದಿದ್ದಾರೆ ಅಂದ್ರೆ ಅವರಿಗೆ ಪರಿಶಿಷ್ಟರಿಗೆ ನೀಡಬೇಕಾದ ಮೀಸಲಾತಿ ನೀಡಬೇಕಿಲ್ಲ ಎಂದು ಮೈಸೂರು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದರು, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ತಡೆಯಬೇಕೆಂಬ ನಿಟ್ಟಿನಲ್ಲಿ ನಾನು ಹಾಗೆ ಹೇಳಿದ್ದೇನೆ. ಜನಪದರು, ಬುಡಕಟ್ಟು ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬುಡಕಟ್ಟಿನವರು ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ನೀಡಬಾರದು ಎಂದರು.
ಜಾತಿ ವ್ಯವಸ್ಥೆ ಇರುವುದು ಹಿಂದು ಧರ್ಮದಲ್ಲಿ ಮಾತ್ರ. ಜಾತಿಯಲ್ಲಿ ಹಿಂದುಳಿದಿದ್ದಾರೆ ಎಂದು ಅವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಲಾಗಿದೆ. ಈಗ ಅವರನ್ನು ದಲಿತ ಕ್ರೈಸ್ತರು ಎಂಬ ನೆಲೆಯಲ್ಲಿ ಮೀಸಲಾತಿ ಕೊಡಬೇಕು ಅಂದರೆ ಅದು ಹೇಗೆ ಸಾಧ್ಯ. ಕ್ರಿಶ್ಚಿಯನ್ ಮತ್ತು ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ ಎಂಬುದನ್ನು ಅವರೇ ಹೇಳುತ್ತಾರೆ. ಈ ಮಾತಿಗೆ ವಿವೇಚನೆ ಇದೆಯೇ ಎಂಬುದನ್ನು ಕೇಳಿದ್ದೇನೆ. ಈ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಸಂಸದರು, ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬುಡಕಟ್ಟು ಜನಾಂಗಗಳಿಗೆ ನೀಡಬಾರದು ಎಂದು ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸಂಸದ ಪ್ರತಾಪಸಿಂಹ ಕ್ರಿಸ್ತಿಯನ್ನರ ಬಗ್ಗೆ ಅವಹೇಳನ ಮಾಡಿದ್ದಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm