ಬ್ರೇಕಿಂಗ್ ನ್ಯೂಸ್
07-03-21 03:02 pm Headline Karnataka News Network ಕರ್ನಾಟಕ
ದಾವಣಗೆರೆ,ಮಾ.7: ಡಿಜಿಟಲ್ ಯುಗ ಹಾಗೂ ಡಿಮಾನಿಟೀಷನ್ ಕಾಲದಲ್ಲಿ ಹೊಸಾ ಹೊಸಾ ನೋಟುಗಳು ಬರ್ತಾ ಇದ್ದು, ಹಳೇಯ ನೋಟುಗಳು ಕಣ್ಮರೆಯಾಗುತ್ತಿದೆ. ಇಂದಿನ ಕಾಲದ ಮಕ್ಕಳಿಗೆ ಹಳೆಯ ನೋಟು, ನಾಣ್ಯಗಳ ಪರಿಚಯವೇ ಇಲ್ಲದಂತಾಗಿದೆ. ಅಂತಹ ಮಕ್ಕಳಿಗೆ ರಾಜರ ಕಾಲದ ನ್ಯಾಣ್ಯಗಳಿಂದ ಹಿಡಿದು 150 ಕ್ಕೂ ಹೆಚ್ಚು ದೇಶಗಳ ನೋಟುಗಳನ್ನ ಪ್ರದರ್ಶನದ ಮೂಲಕ ಪರಿಚಯಿಸಲಾಯಿತು.

ನಾಣ್ಯ ಹಾಗೂ ನೋಟುಗಳ ಪ್ರದರ್ಶನ
ದಾವಣಗೆರೆಯ ಎಂಸಿಸಿಬಿ ಬ್ಲಾಕ್ನಲ್ಲಿರುವ ಸಮುದಾಯ ಭವನದಲ್ಲಿ, ರೋಟರಿ ಕ್ಲಬ್ ವತಿಯಿಂದ ಹಳೆಯ ನೋಟು ಹಾಗೂ ನಾಣ್ಯಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಈರಪ್ಪ ಜಿ ಪರಮಶೆಟ್ಟಿ ಎನ್ನುವರು ಸಂಗ್ರಹಿಸಿದ್ದ ನಾಣ್ಯ ಹಾಗೂ ನೋಟುಗಳ ಪ್ರದರ್ಶನ ಹಮ್ಮಿಕೊಂಡಿದ್ದು, ಇದರಲ್ಲಿ ನೂರೈವತ್ತಕ್ಕೂ ಹೆಚ್ಚು ದೇಶಗಳ ನೋಟುಗಳನ್ನು ಹಾಗೂ ಚಂದ್ರಗುಪ್ತ ಮೌರ್ಯ, ಹೊಯ್ಸಳ, ಕದಂಬ, ಪೇಶ್ವೆಗಳ ಕಾಲದ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿತ್ತು.

ಚಿಕ್ಕ ವಯಸ್ಸಿನಿಂದ ಈ ಹವ್ಯಾಸ
ಅಲ್ಲದೆ 92 ಮಾದರಿಯ ಒಂದು ರೂಪಾಯಿ ನೋಟುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಫ್ಯಾನ್ಸಿ ನಂಬರ್ಗಳ ನೋಟುಗಳು ಸೇರಿದಂತೆ ಮ್ಯಾಜಿಕ್ ನಂಬರ್ಗಳನ್ನು ಕೂಡ ಸಾರ್ವಜನಿಕರ ಪ್ರದರ್ಶನಕ್ಕೆ ಇಟ್ಟಿದ್ದರು. ಇನ್ನು ಈ ನೋಟು ಹಾಗೂ ನಾಣ್ಯಗಳ ಪ್ರದರ್ಶನ ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದು, ಚಿಕ್ಕ ವಯಸ್ಸಿನಿಂದ ಈ ಹವ್ಯಾಸ ಬಂದಿದ್ದು ಎನ್ನುತ್ತಾರೆ ಸಂಗ್ರಹಕಾರರು.

ವಿಧ್ಯಾರ್ಥಿಗಳ ಜೊತೆ ಸಾರ್ವಜನಿಕರು ಆಗಮಿಸಿ ಜ್ಞಾನವನ್ನು ಹೆಚ್ವಿಸಿಕೊಳ್ಳುತ್ತಿದ್ದಾರೆ
ಇನ್ನು ಈ ಸೂರಿನಡಿ ಮಕ್ಕಳಿಗೆ ವಿಶೇಷವಾಗಿ ನೋಟು ನಾಣ್ಯಗಳ ಬಗ್ಗೆ ಅಧ್ಯಾಯನ ನಡೆಸಲು ಈರಣ್ಣರವರಿಂದ ಮಾರ್ಗದರ್ಶನ ನೀಡುತ್ತಿದ್ದು, ಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡು ಜ್ಞಾನವನ್ನು ಹೆಚ್ವಿಸಿಕೊಳ್ಳಲು ಸಹಕಾರಿಯಾಗಿತ್ತು. ಇನ್ನು ರಿಸರ್ವ ಬ್ಯಾಂಕ್ನ ಗವರ್ನರ್ಗಳ ಅವಧಿಯಲ್ಲಿ ಯಾವ ಯಾವ ನೋಟುಗಳ ಮುದ್ರಣವಾಯ್ತು ಎನ್ನುವುದರ ಬಗ್ಗೆ ಕೂಡ ಮಾಹಿತಿ ನೀಡಿ ನೋಟುಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದರು. ಇದರಿಂದ ವಿಧ್ಯಾರ್ಥಿಗಳು ಪ್ರದರ್ಶನ ಮೇಳದಲ್ಲಿ ಭಾಗವಹಿಸಿ ನೋಟುಗಳ ಬಗ್ಗೆ ಮಾಹಿತಿ ತಿಳಿದು ಜ್ಞಾನವನ್ನು ಹೆಚ್ವಿಸಿಕೊಂಡರು.
Old currency expo held in Davanagere, Karnataka. Hundreds flocked into the expo to see various currencies.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm