ಬ್ರೇಕಿಂಗ್ ನ್ಯೂಸ್
07-03-21 10:07 pm Headline Karnataka News Network ಕರ್ನಾಟಕ
ಭಟ್ಕಳ, ಮಾ.7 : ಕೈಗೆ ಕಟ್ಟಿದ್ದ ವಾಚ್ ನಲ್ಲಿ ಚಿನ್ನ ಅಡಗಿಸಿಟ್ಟಿದ್ದಾನೆಂದು ನಂಬಿ ಭಟ್ಕಳ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ದುಬಾರಿ ಬೆಲೆಯ ಕೈಗಡಿಯಾರವನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಡಿದ ಘಟನೆ ಕೇರಳದ ಕ್ಯಾಲಿಕಟ್ನಲ್ಲಿ ನಡೆದಿದೆ.
ಭಟ್ಕಳ ಕಾರಗದ್ದೆ ನಿವಾಸಿ ಮಹ್ಮದ್ ಇಸ್ಮಾಯಿಲ್ ಅವರ ಸಹೋದರ ದುಬೈನಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ಇಸ್ಮಾಯಿಲ್ ವಿಸಿಟಿಂಗ್ ವೀಸಾ ಪಡೆದು ಸಹೋದರನ ಬಳಿ ತೆರಳಿದ್ದರು. ಇವರು ಊರಿಗೆ ವಾಪಸ್ಸಾಗುತ್ತಿದ್ದಾಗ ಮಾ.3 ರಂದು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ಇಸ್ಮಾಯಿಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕೈಯಲ್ಲಿದ್ದ ಕೈಗಡಿಯಾರದ ಬಗ್ಗೆ ಸಂಶಯಗೊಂಡು ಅಧಿಕಾರಿಗಳು ವಶಕ್ಕೆ ಪಡೆದು ಅದನ್ನು ಒಡೆದು ಹಾಕಿದ್ದಾರೆ. ಗಡಿಯಾರದಲ್ಲಿ ಚಿನ್ನ ಇಲ್ಲದಿರುವುದನ್ನು ತಿಳಿದು ಪುಡಿಯಾದ ಗಡಿಯಾರವನ್ನು ಟ್ರೇನಲ್ಲಿ ಇಟ್ಟು ಇಸ್ಮಾಯಿಲ್ ಅವರಿಗೆ ಹಿಂದಿರುಗಿಸಿದ್ದಾರೆ. ಒಡೆದ ಗಡಿಯಾರ ಕಂಡು ಕಂಗಾಲಾದ ಇಸ್ಮಾಯಿಲ್, ತನ್ನ ಗಡಿಯಾರವನ್ನು ತನಗೆ ವಾಪಸ್ಸು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಗಡಿಯಾರದ ಮೌಲ್ಯವನ್ನು ಕೇಳಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳೂ ತಬ್ಬಿಬ್ಬಾಗಿದ್ದಾರೆ. ಈ ಕುರಿತು ಇಸ್ಮಾಯಿಲ್ ಕ್ಯಾಲಿಕಟ್ ಪೊಲೀಸ್ ಠಾಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಹಳೆಯ ಕೈ ಗಡಿಯಾರಗಳ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.
ಕೈಯಲ್ಲಿ ಕಟ್ಟಿಕೊಂಡು ಓಡಾಡಿದ್ದ ಆತ, ಕಳೆದ ತಿಂಗಳಷ್ಟೇ ದುಬೈಗೆ ಬಂದ ತನ್ನ ಸಹೋದರನಿಗೆ ನೀಡಿದ್ದರು. ದುಬಾರಿ ಬೆಲೆಯ ಕೈಗಡಿಯಾರದೊಂದಿಗೆ ಇಸ್ಮಾಯಿಲ್ ಭಾರತಕ್ಕೆ ವಾಪಸ್ಸಾಗಿದ್ದು, ಗಡಿಯಾರದ ಮೌಲ್ಯವರಿಯದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ಒಡೆದು ಚಿನ್ನಕ್ಕಾಗಿ ತಲಾಶೆ ನಡೆಸಿದ್ದಾರೆ.
Custom officers of Kerala break 60 lakhs worth watch of a Bhatkal Man suspecting that the person was carrying God inside the Watch.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm