ಬ್ರೇಕಿಂಗ್ ನ್ಯೂಸ್
08-03-21 02:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.8: ಸಿಗ್ನಲ್ ಜಂಪ್ ಮಾಡಿದ್ದನ್ನು ಟ್ರಾಫಿಕ್ ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ರಂಪಾಟ ಮಾಡಿದ್ದಲ್ಲದೆ ಸಂಚಾರಿ ಎಎಸ್ಐ ಒಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕುತ್ತಿಗೆ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ನಡೆದಿದೆ.
ಸಂಚಾರಿ ಎಎಸ್ಐ ಬಸವಯ್ಯ ಎಂಬವರ ಮೇಲೆ ಕಾರು ಚಾಲಕಿ ಅಪೂರ್ವಿ ಡಿಯಾಸ್ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ತಮ್ಮ ಮೇಲೆ ಹಲ್ಲೆ ನಡೆಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬಸವಯ್ಯ ದೂರು ನೀಡಿದ್ದಾರೆ.
ಬಸವಯ್ಯ ದೂರಿನ ಆಧಾರದ ಮೇಲೆ ಮಹಿಳೆ ವಿರುದ್ಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉತ್ತರ ಪ್ರದೇಶ ಮೂಲದ ಮಹಿಳೆ ಅಪೂರ್ವಿ ಡಿಯಾಸ್ ಶನಿವಾರ ಮಧ್ಯಾಹ್ನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಸಿಗ್ನಲ್ ಜಂಪ್ ಮಾಡಿದ್ದಾರೆ. ಆಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವಯ್ಯ ಮಹಿಳೆಯನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಸಂಚಾರಿ ಕಾನೂನು ಉಲ್ಲಂಘನೆ ಮಾಡಿದ್ದಲ್ಲದೇ, ಎಎಸ್ಐಗೆ ಅವಾಚ್ಯವಾಗಿ ನಿಂದಿಸಿ ರಂಪಾಟ ಮಾಡಿದ್ದರು.
ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಎಎಸ್ಐ ಹೇಳಿದ್ದು ಕೋಪಗೊಂಡ ಮಹಿಳೆ ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸಮವಸ್ತ್ರ ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾರೆ. ಈ ಹಿನ್ನೆಲೆ ಬಸವಯ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Women Slaps Traffic Police for Questioning Singnal Jump in Bangalore. A case has been registered against her.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm