ಬ್ರೇಕಿಂಗ್ ನ್ಯೂಸ್
08-03-21 05:12 pm Headline Karnataka News Network ಕರ್ನಾಟಕ
ಉಡುಪಿ, ಮಾ.8: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣ ಒಂದರಲ್ಲಿ ಆರೋಪಿ, ಪತ್ರಕರ್ತನ ಸೋಗಿನಲ್ಲಿದ್ದ ಚಂದ್ರ ಕೆ. ಹೆಮ್ಮಾಡಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ವ್ಯಾಪ್ತಿಯ ಪೋಕ್ಸೋ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಚಂದ್ರ ಕೆ.ಹೆಮ್ಮಾಡಿ ತಾನು ವರದಿಗಾರನೆಂದು ಹೇಳಿಕೊಂಡು ಬೈಂದೂರು ಭಾಗದ ಗ್ರಾಮೀಣ ಪ್ರದೇಶಕ್ಕೆ ತೆರಳಿ, ಅಲ್ಲಿನ ಬಾಲಕನೊಬ್ಬನಿಗೆ ಪ್ರಾಣಿ, ಪಕ್ಷಿ, ಶಾಲಾ ಕಟ್ಟಡದ ಛಾಯಾಚಿತ್ರ ತೆಗೆಯಲು ತನ್ನ ಜೊತೆ ಬರುವಂತೆ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆತನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಬೈಂದೂರು ಠಾಣೆಗೆ ನೀಡಿದ ದೂರಿನಂತೆ 2018 ನವೆಂಬರ್ ತಿಂಗಳಿನಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಆಬಳಿಕ ಆರೋಪಿ ವಿರುದ್ಧ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದ್ದು ಬಾಲಕರ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ಧ ಸರದಿಯಂತೆ ಪೋಕ್ಸೋ ಕಾಯ್ದೆಯಡಿ ಬೈಂದೂರು, ಕೊಲ್ಲೂರು ಸಹಿತ ವಿವಿಧ ಠಾಣೆಗಳಲ್ಲಿ 21 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಮೊದಲ ಪ್ರಕರಣದಲ್ಲಿ ಅಂದಿನ ಬೈಂದೂರು ಸಿಪಿಐ ಪರಮೇಶ್ವರ್ ಆರ್. ಗುನಗಾ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು 36 ಸಾಕ್ಷಿಗಳಲ್ಲಿ ಸಂತ್ರಸ್ತ ಬಾಲಕನ ಸಹಿತ 15 ಮಂದಿ ಸಾಕ್ಷಿ ನುಡಿದಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಯಾದವ್ ವನಮಾಲಾ ಆನಂದರಾವ್, ಆರೋಪಿಗೆ ಮೊದಲ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದೆ. ದಂಡದಲ್ಲಿ 5 ಸಾವಿರ ಸರಕಾರಕ್ಕೆ, 5 ಸಾವಿರ ನೊಂದ ಬಾಲಕನಿಗೆ ನೀಡಲು ಆದೇಶ ನೀಡಲಾಗಿದೆ.
ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
A Man who was reportedly calling himself an Journalsit in Udupi has been ordered bh the court for 10 years imprisonment for sexually harrsing boys by taking him to an isolated area.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm