ಬ್ರೇಕಿಂಗ್ ನ್ಯೂಸ್
09-03-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.9: ಸಿಡಿ ಪ್ರಕರಣದಿಂದ ಬೆಚ್ಚಿಬಿದ್ದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಮೌನ ಮುರಿದಿದ್ದಾರೆ. ಸಿಡಿ ಪೂರ್ತಿ. ನನಗೂ ಅದಕ್ಕೂ ಸಂಬಂಧ ಇಲ್ಲ. ನನ್ನ ಹೆಸರು ಕೆಡಿಸಲು ಷಡ್ಯಂತ್ರ ನಡೆದಿದೆ. ಹಾಗಂತ, ನಾನು ಇದನ್ನು ಇಲ್ಲಿಗೇ ಬಿಡಲ್ಲ. ಇದರ ಹಿಂದೆ ಇರೋ ದೊಡ್ಡ ನಾಯಕರನ್ನು ಬಯಲಿಗೆ ತರುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗು ವಂದನೆಗಳು. ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿಗೆ ನನ್ನ ವಂದನೆಗಳು. ನೂರಕ್ಕೆ ನೂರರಷ್ಟು ಈ CD ನಕಲಿ. ನಾನು ನಿರಪರಾಧಿ, ಎಂದು ಹೇಳಿದ್ದಾರೆ.
ಬೆಂಗಳೂರಿನ ಎರಡು ಕಡೆ ಷಡ್ಯಂತ್ರ ನಡೆದಿದೆ. ಸಿಡಿ ಬಿಡುಗಡೆಯಾದ ಒಂದು ದಿನ ರಾತ್ರಿ ಕಾದು ನಂತರ ರಾಜೀನಾಮೆ ನೀಡಿದೆ. ಏನೇನು ಆಗುತ್ತೆ ಎಂದು ತಿಳಿಯೋಣ ಎಂದು ಸುಮ್ಮನಿದ್ದೆ. ನಾನು ರಾಜೀನಾಮೆ ಕೊಟ್ಟು ನೇರವಾಗಿ ಊರಿಗೆ ಹೋಗಿದ್ದೆ. ನಂತರ ಏನು ಬೆಳವಣಿಗೆ ನಡೆದಿದೆ ಎಂದು ನನಗೆ ಗೊತ್ತಿಲ್ಲ. ಒಬ್ಬ ಮಹಾನ್ ನಾಯಕನಿಂದ ಇದೆಲ್ಲಾ ಆಗಿದೆ. ಅವರ ಬಗ್ಗೆ ಈಗ ಹೇಳುವುದಕ್ಕೆ ಆಗುವುದಿಲ್ಲ. ಇದೊಂದು ಬಹಳ ಸೂಕ್ಷ್ಮ ವಿಚಾರವಾಗಿದೆ. ಇದನ್ನು ರಾಜಕೀಯ ಮಾಡುವುದಕ್ಕೆ ಹೋಗಬಾರದು. ಯಶವಂತಪುರ, ಹುಳಿಮಾವು ಸೇರಿ ಬೆಂಗಳೂರಿನ 2 ಕಡೆ ಷಡ್ಯಂತ್ರ ನಡೆದಿದೆ. ಯಶವಂತಪುರದ 4, 5ನೇ ಮಹಡಿಯಲ್ಲಿ ಷಡ್ಯಂತ್ರ ನಡೆದಿದೆ. ಅವರನ್ನು ಜೈಲಿಗೆ ಹಾಕದೆ ಸುಮ್ಮನೆ ಬಿಡುವುದಿಲ್ಲ. ನಾನು ಸುಮ್ಮನೆ ಇದರಲ್ಲಿ ರಾಜಕೀಯ ಮಾಡಲು ಹೋಗಲ್ಲ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳನ್ನು ಹೇಳುತ್ತೇನೆ ಎಂದರು.
ಯುವತಿಗೆ 50 ಲಕ್ಷವಲ್ಲ, 5 ಕೋಟಿ ನೀಡಿರುವ ಮಾಹಿತಿ ಇದೆ. ನನಗೆ ಎಲ್ಲ ಪಕ್ಷದವರ ಮೇಲೆ ಗೌರವ ಇದೆ. ನನಗೆ ರಾಜಕಾರಣ ಬೇಕಿಲ್ಲ, ಕುಟುಂಬದ ಗೌರವ ಮುಖ್ಯ. ನಾವು ಈವರೆಗೆ ಯಾರ ವಿರುದ್ಧವೂ ಆರೋಪ ಮಾಡಿಲ್ಲ. ಹೆಚ್.ಡಿ.ಕುಮಾರಸ್ವಾಮಿ ನನ್ನ ಪರವಾಗಿ ಮಾತನಾಡಿದ್ದಾರೆ. ಮೊದಲು ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಮಾತನಾಡಿದ್ದರು. ಸಿಡಿಯಲ್ಲಿದ್ದ ಯುವತಿಗೆ 50 ಲಕ್ಷವಲ್ಲ, 5 ಕೋಟಿ ನೀಡಿರುವ ಮಾಹಿತಿ ಇದೆ. ಇದರ ವಿರುದ್ಧ ನಾನೇಕೆ ದೂರು ನೀಡುವುದಕ್ಕೆ ಹೋಗಲಿ. ಆರೋಪವನ್ನು ನಾನು ಧೈರ್ಯವಾಗಿ ಎದುರಿಸುತ್ತೇನೆ. ನನ್ನ ವಿರೋಧಿಗಳಿಗೆ ಇದೊಂದು ದೊಡ್ಡ ಅಸ್ತ್ರವಾಗಿದೆ. ಇಂತಹವು 10 ದೂರು ಬಂದರೂ ನಾನು ಎದುರಿಸಲು ಸಿದ್ಧನಿದ್ದೇನೆ. ನನಗೆ ಖಾತೆ ಬೇಕೆಂದು ನಾನು ಕೇಳುವುದಕ್ಕೆ ಹೋಗಲ್ಲ. ನನಗೆ ನನ್ನ ಕುಟುಂಬದ ಗೌರವವೇ ಮುಖ್ಯ ಎಂದು ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ. ಇದೇ ವೇಳೆ, ಸಿಡಿಯಲ್ಲಿರೋದು ನಾನಲ್ಲ ಎಂಬ ಮಾತನ್ನು ಪುನರುಚ್ಚರಿಸಿದ್ದಾರೆ.
Former BJP minister Ramesh Jarkiholi briefs media in Bangalore about his sex video release. He has claimed that he is innocent and the sex CD was a conspiracy against him.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am