ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm