ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm