ಬ್ರೇಕಿಂಗ್ ನ್ಯೂಸ್
14-03-21 08:21 pm Headline Karnataka News Network ಕರ್ನಾಟಕ
ಹೊಸಕೋಟೆ, ಮಾ 14: ಪಟ್ಟಣದ ಎಂ ವಿ ಬಡಾವಣೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆಯ ಅಶ್ವಿನಿ (23) ಮೃತ ಯುವತಿ. ಮೂರು ದಿನಗಳ ಹಿಂದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗ್ತಿದೆ. ಎರಡು ವರ್ಷಗಳ ಹಿಂದೆ ಅಶ್ವಿನಿಗೆ ಫೇಸ್ಬುಕ್ನಲ್ಲಿ ಆಟೋ ಚಾಲಕ ಸುರೇಶ್ ಎಂಬಾತನ ಪರಿಚಯವಾಗಿತ್ತು. ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದ ಅಶ್ವಿನಿ ಕೆಲಸಕ್ಕೆ ಹೋಗುವಾಗ ಆಟೋ ಚಾಲಕ ಸುರೇಶ್, ದಿನಾಲು ಆಕೆಯನ್ನು ಡ್ರಾಪ್ ಮಾಡುತ್ತಿದ್ದ.
ಈ ವೇಳೆ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು. ಎರಡು ತಿಂಗಳ ಹಿಂದೆ ಸುರೇಶ್ ಅಶ್ವಿನಿಯನ್ನು ಹೊಸಕೋಟೆಯಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆತಂದು ಆಕೆಯ ಜೊತೆಗೆ ವಾಸವಿದ್ದ ಎಂದು ತಿಳಿದು ಬಂದಿದೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ವಿನಿ ಮತ್ತು ಸುರೇಶ್ ಇಬ್ಬರೂ ಅನ್ಯೋನ್ಯವಾಗಿದ್ದರು. ಇತ್ತೀಚೆಗೆ ಸುರೇಶ್ ತನಗೆ ವಂಚಿಸಿರುವುದಾಗಿ ಅಶ್ವಿನಿ ಸೂಲಿಬೆಲೆ ಪೊಲೀಸರ ಮೊರೆ ಹೋಗಿದ್ದಳು. ಈ ವೇಳೆ ಅಶ್ವಿನಿ ಮತ್ತು ಸುರೇಶ್ ಅನ್ನು ಕರೆದು ಮಾತನಾಡಿಸಿದ ಪೊಲೀಸರು, ಇಬ್ಬರ ನಡುವೆ ರಾಜಿ ಮಾಡಿ ಕಳಿಸಿದ್ದರು.
ಆದರೆ, ಇದೀಗ ಅಶ್ವಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಶ್ವಿನಿಯನ್ನು ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸುರೇಶ್ಗಾಗಿ ಹುಡುಕಾಡುತ್ತಿದ್ದಾರೆ.
ಮೃತ ಅಶ್ವಿನಿಯ ಚಿಕ್ಕಮ್ಮ ಅಂಬಿಕಾ ಮಾತನಾಡಿ, ಸುರೇಶ್ ದುಡ್ಡಿಗಾಗಿ ಅಶ್ವಿನಿಯನ್ನು ಪೀಡಿಸುತ್ತಿದ್ದ. 35 ಸಾವಿರ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಹಣ ತಂದರೆ ಮಾತ್ರ ಮನೆಗೆ ಬಾ, ಇಲ್ಲದಿದ್ದರೆ ಸತ್ತು ಹೋಗು ಎಂದು ಗಲಾಟೆ ಮಾಡಿದ್ದ. ಇದನ್ನು ಸಾಯುವ ಮುನ್ನ ಅಶ್ವಿನಿ ಹೇಳಿಕೊಂಡಿದ್ದಾಳೆ.
ನಮ್ಮ ಮಗುವನ್ನು ಸುರೇಶ್ ಮೋಸ ಮಾಡಿ ಕರೆತಂದು, ಕೊಲೆ ಮಾಡಿದ್ದಾನೆ. ಈ ಮೊದಲು ಅಶ್ವಿನಿಗೆ ಮದುವೆಯಾಗಿದ್ದು, ಗಂಡನಿಂದ ದೂರವಾಗಿದ್ದಳು. ಆಕೆಗೆ ಒಂದು ಮಗು ಕೂಡ ಇದೆ. ಫೇಸ್ಬುಕ್ನಲ್ಲಿ ಪರಿಚಯವಾಗಿ, ಕಳೆದ 2 ತಿಂಗಳ ಹಿಂದೆ ಮದುವೆಯಾಗದೆ ಒಂದೇ ಮನೆಯಲ್ಲಿ ವಾಸವಿದ್ದರು. ದುಡ್ಡಿಗಾಗಿ ಪೀಡಿಸಿ ಕೊಲೆ ಮಾಡಿ ಪರಾರಿ ಆಗಿದ್ದಾನೆ ಎಂದು ಆರೋಪಿಸಿದ್ದಾರೆ.
Boyfriend whose a auto driver by profession is alleged of Killing his girlfriend for the sake of money in Tumkur.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am