ಬ್ರೇಕಿಂಗ್ ನ್ಯೂಸ್
15-03-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಇಂದಿನಿಂದ ಎರಡು ದಿನ ಸಾರ್ವಜನಿಕರಿಗೆ ತಟ್ಟಲಿದೆ ಬ್ಯಾಂಕ್ ಬಂದ್ ಬಿಸಿ. ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಇಂದು ಮತ್ತು ನಾಳೆ ರಾಷ್ಟ್ರೀಕೃತ ಬ್ಯಾಂಕ್ಗಳ ನೌಕರರಿಂದ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿಂದು ಧರಣಿ ನಡೆಸಲಿದ್ದು ಸಾವಿರಾರು ಬ್ಯಾಂಕ್ ನೌಕರರು ಭಾಗಿಯಾಗಲಿದ್ದಾರೆ. ಬ್ಯಾಂಕ್ ಸಿಬ್ಬಂದಿ ಮುಷ್ಕರದಿಂದ ಗ್ರಾಹಕರಿಗೆ ಸಮಸ್ಯೆಯಾಗುವ ಸಾಧ್ಯತೆಗಳಿವೆ.

ಕೇಂದ್ರ ಸರ್ಕಾರ ಈ ಬಾರಿ ಬಜೆಟ್ನಲ್ಲಿ 2ಬ್ಯಾಂಕ್ ಖಾಸಗೀಕರಣ ಮಾಡೋದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಯತ್ನಿಸುತ್ತಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರೋದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್ಗಳು ಅಕ್ರಮ ಎಸಗಿವೆ. ಬ್ಯಾಂಕ್ ಖಾಸಗೀಕರಣದಿಂದ ವಿದೇಶಿ ಬಂಡವಾಳದಾರರು ಹಾಗೂ ಉದ್ಯಮಪತಿಗಳ ಕೈಗೆ ಬ್ಯಾಂಕ್ ಹೋಗಲಿದೆ. ಇದು ದೇಶದ ಭವಿಷ್ಯದ ಆರ್ಥಿಕತೆಗೆ ಮುಳುವಾಗಲಿದೆ. ದೇಶದ ಆರ್ಥಿಕತೆ ಖಾಸಗಿ ಕ್ಷೇತ್ರದ ಹಿಡಿತಕ್ಕೆ ಸಿಲುಕಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬ್ಯಾಂಕ್ ಖಾಸಗೀಕರಣದ ತೀರ್ಮಾನ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನದ ಮುಷ್ಕರಕ್ಕೆ ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ವೇದಿಕೆ ಕರೆಕೊಟ್ಟಿದೆ.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು?
ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.
The United Forum of Bank Union (UFBU), an umbrella body of nine bank unions, has called for a two-day nationwide strike on March 15 and 16 against the privatisation of Public Sector Banks and retrograde banking reforms. Over 10 lakh bank employees and officers will participate in the strike.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm