ಬ್ರೇಕಿಂಗ್ ನ್ಯೂಸ್
15-03-21 08:01 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು, ತಜ್ಞರ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಸುಳಿವು ನೀಡಿದ್ದಾರೆ.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ , ಬೀದರ್, ಕಲಬುರಗಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಲ್ಲಿ ಕೋವಿಡ್ ಸೋಕು ಹೆಚ್ಚುತ್ತಿರುವುದು ಕಂಡುಬಂದಿದೆ. ಹೀಗಾಗಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ 3500 ವ್ಯಾಕ್ಸಿನೇಶನ್ ಸೆಂಟರ್ ಇದೆ. ಪ್ರತಿ ದಿನ 3500 ಮಂದಿ ಲಸಿಕೆ ಪಡೆದರೆ ದಿನದಲ್ಲಿ 3.50 ಲಕ್ಷ ಜನರು ಲಸಿಕೆ ಪಡೆಯಬಹುದು. ಲಸಿಕೆ ಹಾಕುವ ಪ್ರಕ್ರಿಯೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
![]()
ಪಾಸಿಟಿವ್ ಹೆಚ್ಚಿರುವ ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆಯನ್ನು ಹೆಚ್ಚಿಸಲಾಗುವುದು. ಅಪಾರ್ಟ್ಮೆಂಟ್ ಗಳಲ್ಲಿ ಲಸಿಕೆ ಅಭಿಯಾನ ನಡೆಸಲಾಗುವುದು. ಮತದಾರರ ಪಟ್ಟಿ ಆಧರಿಸಿ, ಹಿರಿಯ ನಾಗರಿಕರಿಗೆ ಲಸಿಕೆ ನೀಡಲು ತಜ್ಞರು ಸೂಚಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಮದುವೆ, ರಾಜಕೀಯ ಸಭೆ ಇನ್ನಿತರ ಯಾವುದೇ ರೀತಿಯ ಸಭೆ, ಸಮಾರಂಭಗಳಲ್ಲಿ 500ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಈ ನಿಮಯ ಕಡ್ಡಾಯ ಪಾಲಿಸುವಂತೆ ಸ್ಥಳೀಯಾಡಳಿತಕ್ಕೆ ಸೂಚನೆ ನೀಡುತ್ತೇನೆ. ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಮಂದಿಯ ಮೇಲೆ ನಿಗಾ ಇಡಲಾಗುವುದು. ಸಾರಿಗೆ ಬಸ್ ಗಳಲ್ಲಿ ನಿಗದಿತ ಸಂಖ್ಯೆಯ ಪ್ರಯಾಣಿಕರಷ್ಟೇ ಸಂಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮತ್ತೆ ಲಾಕ್ಡೌನ್, ಕರ್ಫ್ಯೂ, ಬಂದ್ ಬೇಡ ಎಂದಿದ್ದರೆ, ಜನರೇ ಸ್ವಯಂಪ್ರೇರಿತವಾಗಿ ಮುಂಜಾಗ್ರತೆ ವಹಿಸಬೇಕು. ಲಾಕ್ಡೌನ್ ಪರಿಸ್ಥಿತಿ ಆಗದಂತೆ ಜನರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
Covid rise in Karnataka , the CM has given a veiled warning to the citizens that unless people themselves start taking precautions the government may consider further stringent action.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm