ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm