ಬ್ರೇಕಿಂಗ್ ನ್ಯೂಸ್
17-03-21 12:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.17: ಆರೆಸ್ಸೆಸ್ ರಾಷ್ಟ್ರೀಯ ಅಧಿವೇಶನವಾದ ಅಖಿಲ ಭಾರತ ಪ್ರತಿನಿಧಿ ಸಭಾ ಈ ಬಾರಿಯೂ ಬೆಂಗಳೂರಿನಲ್ಲೇ ಆಯೋಜಿಸಲಾಗಿದೆ. ಮಾರ್ಚ್ 19 ಹಾಗೂ 20ರಂದು ಅಧಿವೇಶನ ನಡೆಯಲಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ಸಭೆ ಆಯೋಜನೆಯಾಗಿತ್ತಾದರೂ ಕೊರೊನಾ ಸೋಂಕಿನ ಕಾರಣ ಕೊನೆಕ್ಷಣದಲ್ಲಿ ರದ್ದುಪಡಿಸಲಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಮಹಾರಾಷ್ಟ್ರದ ನಾಗಪುರದಲ್ಲಿ ಅಧಿವೇಶನ ನಡೆಯುವುದು ಹಿಂದಿನಿಂದ ಬಂದ ಸಂಪ್ರದಾಯವಾಗಿತ್ತು. ಕಳೆದ ಬಾರಿ ಬೆಂಗಳೂರಿನಲ್ಲಿ ಮಹತ್ವದ ಅಧಿವೇಶನ ನಡೆಸಲು ತಯಾರಿ ನಡೆದಿತ್ತು. ಕೊನೆಯ ಹಂತದಲ್ಲಿ ರದ್ದುಗೊಂಡಿದ್ದ ಅಧಿವೇಶನವನ್ನು ಈ ಬಾರಿ ಮತ್ತೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಈ ಅಧಿವೇಶನದಲ್ಲಿ ಪ್ರತಿ ಬಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚುನಾವಣೆ ನಡೆಯುತ್ತದೆ. ಸದ್ಯ ಕಾರ್ಯವಾಹರಾಗಿ ಸುರೇಶ್ ಜೋಷಿ ಇದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಈ ಬಾರಿಯೂ ಚುನಾವಣೆ ನಡೆದಲ್ಲಿ ಮೊದಲ ಬಾರಿ ಬೆಂಗಳೂರಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಂತೆ ಆಗಲಿದೆ. ಜೋಶಿ ಅವರು 12 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಅವರೇ ಮತ್ತೆ ಅಧಿಕಾರ ಬಯಸಿದರೆ ಆರ್ ಎಸ್ಎಸ್ ಮುಖ್ಯಸ್ಥರೇ ನಿರ್ಧರಿಸುತ್ತಾರೆ. 72 ವರ್ಷದ ಜೋಶಿ ಅವರು ಅದೇ ಸ್ಥಾನದಲ್ಲಿ ಮುಂದುವರಿದರೆ ಮತ್ತೆ ಮೂರು ವರ್ಷಕ್ಕೆ ಅವರ ಅವಧಿಯಿರುತ್ತದೆ.

ಸುರೇಶ್ ಭೈಯಾಜಿ ಜೋಷಿ ಅಧಿಕಾರದಿಂದ ಕೆಳಗಿಳಿಯಲು ಬಯಸಿದರೇ, ಅದನ್ನು ಪಡೆಯಲು ಆರು ಮಂದಿ ಸರದಿಯಲ್ಲಿದ್ದಾರೆ. ದತ್ತಾತ್ರೇಯ ಹೊಸಬಾಳೆ, ವಿ. ಭಾಗಯ್ಯ, ಸುರೇಶ್ ಸೋನಿ, ಕೃಷ್ಣ ಗೋಪಾಲ್, ಮನಮೋಹನ್ ವೈದ್ಯ ಮತ್ತು ಮುಕುಂದ ಸಿ.ಆರ್ ಕೂಡ ರೇಸ್ ನಲ್ಲಿದ್ದಾರೆ ಎನ್ನುವ ಮಾಹಿತಿಯಿದೆ.

ಚುನಾವಣೆ ನಡೆಸುವುದು ಸಂಘದ ವರಿಷ್ಠರಿಗೆ ಬಿಟ್ಟ ವಿಷಯವಾಗಿದ್ದು, ಒಟ್ಟು 11 ವಿಭಾಗದ 500 ಮಂದಿ ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಾಗಪುರದಿಂದ ಹೊರಗೆ ಚುನಾವಣೆ ನಡೆಯುತ್ತಿರುವುದು ಬಹಶಃ ಇದೇ ಮೊದಲು ಎನ್ನಲಾಗಿದೆ. ಚನ್ನೇನಹಳ್ಳಿಯ ಜನಸೇವಾ ಕೇಂದ್ರದಲ್ಲೇ ಈ ಬಾರಿಯೂ ಅಧಿವೇಶನ ನಡೆಯಲಿದೆ. ಸಾಮಾನ್ಯವಾಗಿ 1400 ಪ್ರತಿನಿಧಿಗಳು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಆದರೆ ಕೊರೊನಾ ಸೋಂಕು ಇರುವುದರಿಂದ ಈ ಸಲ ಎಷ್ಟು ಮಂದಿ ಪಾಲ್ಗೊಳ್ಳಲಿದ್ದಾರೆಂದು ಖಚಿತವಾಗಿಲ್ಲ.
Bengaluru is again set to host the annual conclave of the Rashtriya Swayamsevak Sangh’s (RSS) highest decision-making body for the first time.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm