ಬ್ರೇಕಿಂಗ್ ನ್ಯೂಸ್
19-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ರಾಜ್ಯದಲ್ಲಿ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಾರಿ ರಣತಂತ್ರ ಹೆಣೆಯಲು ಮುಂದಾಗಿದೆ. ಅದರ ಭಾಗವಾಗಿ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಭೋಜನ ಕೂಟ ಹಮ್ಮಿಕೊಂಡಿದ್ದಾರೆ.
ಮಾರ್ಚ್ 24ರಂದು ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸದಲ್ಲಿ ಭೋಜನ ಕೂಟ ಹಮ್ಮಿಕೊಂಡಿದ್ದು, ಹಿರಿಯ ಮುಖಂಡರನ್ನು ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಉಪ ಚುನಾವಣೆ, ಸಿಡಿ ರಾಜಕೀಯ, ಮೀಸಲಾತಿ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಳೆದ ಎರಡು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು ಈ ಬಾರಿ ಗೆಲ್ಲಲೇಬೇಕೆಂಬ ಸವಾಲು ಕೆಪಿಸಿಸಿ ಮುಂದಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸಿನ ಹಿರಿಯ ಮುಖಂಡರನ್ನು ಕರೆದು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಭೋಜನ ಕೂಟದ ಏರ್ಪಡಿಸಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಿ.ಡಿ ಹಾಗೂ ಇನ್ನಿತರ ವಿಚಾರಗಳಲ್ಲಿ ಮುಜುಗರ ಸೃಷ್ಟಿಯಾಗಿದ್ದು, ಈ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಕಾಂಗ್ರೆಸ್, ಅದೇ ವಿಚಾರವನ್ನು ಮುಂದಿಟ್ಟು ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದ್ಯದ ರಾಜಕೀಯ ಸನ್ನಿವೇಶ ಕಾಂಗ್ರೆಸ್ ಪರವಾಗಿದ್ದು, ಈ ಸಂದರ್ಭದಲ್ಲಿ ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಭಿನ್ನಾಭಿಪ್ರಾಯ ಶಮನ ಗೊಳಿಸುವ ನಿಟ್ಟಿನಲ್ಲಿ ಭೋಜನ ಕೂಟವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ನಾಯಕರ ಒಳಜಗಳ, ಸಚಿವ ಸಂಪುಟದ ಅಸಮಾಧಾನ, ಜೊತೆಗೆ ಸಿಡಿ ರಾಜಕೀಯವನ್ನು ಮುಂದಿಟ್ಟು ಬಿಜೆಪಿಯನ್ನು ಹಣಿಯಲು ಮುಂದಾಗಿದ್ದಾರೆ.
Congress leader Siddaramaiah invites members for dinner party considering Karnataka Bypolls elections 2021.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm