ಬ್ರೇಕಿಂಗ್ ನ್ಯೂಸ್
23-03-21 08:07 pm Headline Karnataka News Network ಕರ್ನಾಟಕ
ಕಾರವಾರ, ಮಾರ್ಚ್ 23: ಬೊಲೆರೋ ಕಾರು ಹಾಗೂ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಿದರಿಯ ರಾಜೇಶ್ವರಿ ಪರಡ್ಡಿ (35) ಹಾಗೂ ಚಿಕ್ಕಮ್ಮ ಪಾಟೀಲ (28) ಮೃತ ಮಹಿಳೆಯರಾಗಿದ್ದು, ತಿಮ್ಮನ ಗೌಡ, ಹನುಮಂತ, ಲಕ್ಷ್ಮೀ, ಶ್ರುತಿ, ಮಕ್ಕಳಾದ ಆಕಾಶ್ ಹಾಗೂ ಅಪೇಕ್ಷಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಹೊಸ ಬೊಲೆರೊ ಕಾರು ಖರೀದಿಸಿದ್ದ ಕಾರಣ ಬಾಗಲಕೋಟೆ ಮೂಲದ ಒಂದೇ ಕುಟುಂಬದ ಎಂಟು ಮಂದಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ತಿರುವಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದವರ ಬೊಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮುಂದೆ ದೂಕಿದೆ. ಈ ವೇಳೆ ಎದುರು ಬರುತ್ತಿದ್ದ ಟಿಪ್ಪರ್ ಗೆ ಬೊಲೆರೊ ಡಿಕ್ಕಿಯಾಗಿದೆ. ಟಿಪ್ಪರ್ ಹಾಗೂ ಲಾರಿಯ ನಡುವೆ ಸಿಕ್ಕಿ ಬೊಲೆರೊ ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ಇನ್ನುಳಿದ ಏಳು ಮಂದಿಯನ್ನು ಬೊಲೆರೊದಿಂದ ಹೊರ ತೆಗೆದ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ತಾಲೂಕು ಆಸ್ಪತ್ರೆಗೆ ಸಾಗಿಸಿದರಾದರೂ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಸದ್ಯ ಚಿಕಿತ್ಸೆ ಮುಂದುವರಿದಿದೆ.
ಅಪಘಾತದಿಂದ ಘಟ್ಟದಲ್ಲಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಸಿಪಿಐ ಸುರೇಶ್ ಯಳ್ಳೂರ್ ಹಾಗೂ ಪಿಎಸ್ಐ ಮಂಜುನಾಥ್ ಗೌಡರ ತೆರಳಿ ಪರಿಶೀಲನೆ ನಡೆಸಿ, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
Two women were killed on the spot after a Bolero car was hit by two trucks after driver lost control in Yellapur, Karwar. The family was said to be going to
Daramasthala.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm