ಬ್ರೇಕಿಂಗ್ ನ್ಯೂಸ್
24-03-21 11:08 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.24: ಕಾಡಿನಿಂದ ನಾಡಿಗೆ ಬಂದಿದ್ದ ಪ್ರಾಣಿಯೊಂದಿಗೆ ಜನ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ತಡರಾತ್ರಿ ಕಾಡುಪಾಪವೊಂದು ಕಾಡಿನಿಂದ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ಗೆ ದಾರಿತಪ್ಪಿ ಬಂದಿದ್ದು ನಾಯಿಗಳಿಂದ ಅಪರೂಪದ ಅತಿಥಿಯನ್ನು ರಕ್ಷಿಸಿದ್ದಾರೆ. ಅಡವಿ ಪಾಪನ ಕಂಡು ಜನ ಸಂತಸಗೊಂಡಿದ್ದಾರೆ. ಮೊದಲಿಗೆ ಭಯವಾದರೂ ಅದು ಕಾಡುಪಾಪ ಎಂದು ತಿಳಿದ ಮೇಲೆ ಪೆಟ್ರೋಲ್ ಬಂಕ್ಗೆ ಬಂದಿದ್ದ ಸವಾರರು ಕಾಡುಪಾಪದೊಂದಿಗೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನು ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿ ಅವರ ಸಮ್ಮುಖದಲ್ಲೇ ಚಾರ್ಮಾಡಿ ಅರಣ್ಯದಲ್ಲಿ ಕಾಡುಪಾಪ ಬಿಟ್ಟು ಬಂದಿದ್ದಾರೆ.
ಇನ್ನು ಕಾಡುಪಾಪಗಳಿಗೆ ದೊಡ್ಡ ಕಣ್ಣು(ಪಾಪೆ) ಇರುವುದರಿಂದ ಅದನ್ನು ಅಡವಿ ಪಾಪ ಎಂದೂ ಸಹ ಕರೆಯುತ್ತಾರೆ. ಕಾಡು ಪ್ರಾಣಿಗಳಲ್ಲೇ ಇದು ಅತ್ಯಂತ ಮುಗ್ಧ ಜೀವಿ. ಕಾಡುಪಾಪಗಳಿಗೆ ಹೆಚ್ಚು ನಾಚಿಕೆ ಸ್ವಭಾವವಿರುತ್ತೆ. ಇವು ನಿಶಾಚರಿ ಜೀವಿಗಳಾದ್ದರಿಂದ ಜನರ ಕಣ್ಣಿಗೆ ಬೀಳುವುದು ಅಪರೂಪ. ತಂಪು ಹವೆಯ ಎಲೆ ತೋಟಗಳು, ಮಾವಿನಮರ, ನೀಲಗಿರಿ, ಆಲ, ಅರಳಿ, ಹುಣಸೆ ಮರಗಳಲ್ಲಿ ಇವು ಬೀಡು ಬಿಡುತ್ತವೆ. ಹಣ್ಣು, ಕಾಯಿ, ಕೀಟ, ಜೀರುಂಡೆ, ಮಿಡತೆ, ಹಲ್ಲಿ, ಹಾವುರಾಣಿ, ಹಕ್ಕಿಗಳ ಮೊಟ್ಟೆ, ಮರಗಪ್ಪೆ ತಿನ್ನುತ್ತವೆ ಎಂದು ಪ್ರಾಣಿ ಪ್ರಿಯರು ಹೇಳುತ್ತಾರೆ.
Slender loris also called as kadu papa was found in Chikmagalur we're people thronged to click selfies with the animal.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm