ಬ್ರೇಕಿಂಗ್ ನ್ಯೂಸ್
24-03-21 11:08 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.24: ಕಾಡಿನಿಂದ ನಾಡಿಗೆ ಬಂದಿದ್ದ ಪ್ರಾಣಿಯೊಂದಿಗೆ ಜನ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ತಡರಾತ್ರಿ ಕಾಡುಪಾಪವೊಂದು ಕಾಡಿನಿಂದ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ಗೆ ದಾರಿತಪ್ಪಿ ಬಂದಿದ್ದು ನಾಯಿಗಳಿಂದ ಅಪರೂಪದ ಅತಿಥಿಯನ್ನು ರಕ್ಷಿಸಿದ್ದಾರೆ. ಅಡವಿ ಪಾಪನ ಕಂಡು ಜನ ಸಂತಸಗೊಂಡಿದ್ದಾರೆ. ಮೊದಲಿಗೆ ಭಯವಾದರೂ ಅದು ಕಾಡುಪಾಪ ಎಂದು ತಿಳಿದ ಮೇಲೆ ಪೆಟ್ರೋಲ್ ಬಂಕ್ಗೆ ಬಂದಿದ್ದ ಸವಾರರು ಕಾಡುಪಾಪದೊಂದಿಗೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನು ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿ ಅವರ ಸಮ್ಮುಖದಲ್ಲೇ ಚಾರ್ಮಾಡಿ ಅರಣ್ಯದಲ್ಲಿ ಕಾಡುಪಾಪ ಬಿಟ್ಟು ಬಂದಿದ್ದಾರೆ.
ಇನ್ನು ಕಾಡುಪಾಪಗಳಿಗೆ ದೊಡ್ಡ ಕಣ್ಣು(ಪಾಪೆ) ಇರುವುದರಿಂದ ಅದನ್ನು ಅಡವಿ ಪಾಪ ಎಂದೂ ಸಹ ಕರೆಯುತ್ತಾರೆ. ಕಾಡು ಪ್ರಾಣಿಗಳಲ್ಲೇ ಇದು ಅತ್ಯಂತ ಮುಗ್ಧ ಜೀವಿ. ಕಾಡುಪಾಪಗಳಿಗೆ ಹೆಚ್ಚು ನಾಚಿಕೆ ಸ್ವಭಾವವಿರುತ್ತೆ. ಇವು ನಿಶಾಚರಿ ಜೀವಿಗಳಾದ್ದರಿಂದ ಜನರ ಕಣ್ಣಿಗೆ ಬೀಳುವುದು ಅಪರೂಪ. ತಂಪು ಹವೆಯ ಎಲೆ ತೋಟಗಳು, ಮಾವಿನಮರ, ನೀಲಗಿರಿ, ಆಲ, ಅರಳಿ, ಹುಣಸೆ ಮರಗಳಲ್ಲಿ ಇವು ಬೀಡು ಬಿಡುತ್ತವೆ. ಹಣ್ಣು, ಕಾಯಿ, ಕೀಟ, ಜೀರುಂಡೆ, ಮಿಡತೆ, ಹಲ್ಲಿ, ಹಾವುರಾಣಿ, ಹಕ್ಕಿಗಳ ಮೊಟ್ಟೆ, ಮರಗಪ್ಪೆ ತಿನ್ನುತ್ತವೆ ಎಂದು ಪ್ರಾಣಿ ಪ್ರಿಯರು ಹೇಳುತ್ತಾರೆ.
Slender loris also called as kadu papa was found in Chikmagalur we're people thronged to click selfies with the animal.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm