ಬ್ರೇಕಿಂಗ್ ನ್ಯೂಸ್
24-03-21 11:08 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.24: ಕಾಡಿನಿಂದ ನಾಡಿಗೆ ಬಂದಿದ್ದ ಪ್ರಾಣಿಯೊಂದಿಗೆ ಜನ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ತಡರಾತ್ರಿ ಕಾಡುಪಾಪವೊಂದು ಕಾಡಿನಿಂದ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ಗೆ ದಾರಿತಪ್ಪಿ ಬಂದಿದ್ದು ನಾಯಿಗಳಿಂದ ಅಪರೂಪದ ಅತಿಥಿಯನ್ನು ರಕ್ಷಿಸಿದ್ದಾರೆ. ಅಡವಿ ಪಾಪನ ಕಂಡು ಜನ ಸಂತಸಗೊಂಡಿದ್ದಾರೆ. ಮೊದಲಿಗೆ ಭಯವಾದರೂ ಅದು ಕಾಡುಪಾಪ ಎಂದು ತಿಳಿದ ಮೇಲೆ ಪೆಟ್ರೋಲ್ ಬಂಕ್ಗೆ ಬಂದಿದ್ದ ಸವಾರರು ಕಾಡುಪಾಪದೊಂದಿಗೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನು ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿ ಅವರ ಸಮ್ಮುಖದಲ್ಲೇ ಚಾರ್ಮಾಡಿ ಅರಣ್ಯದಲ್ಲಿ ಕಾಡುಪಾಪ ಬಿಟ್ಟು ಬಂದಿದ್ದಾರೆ.
ಇನ್ನು ಕಾಡುಪಾಪಗಳಿಗೆ ದೊಡ್ಡ ಕಣ್ಣು(ಪಾಪೆ) ಇರುವುದರಿಂದ ಅದನ್ನು ಅಡವಿ ಪಾಪ ಎಂದೂ ಸಹ ಕರೆಯುತ್ತಾರೆ. ಕಾಡು ಪ್ರಾಣಿಗಳಲ್ಲೇ ಇದು ಅತ್ಯಂತ ಮುಗ್ಧ ಜೀವಿ. ಕಾಡುಪಾಪಗಳಿಗೆ ಹೆಚ್ಚು ನಾಚಿಕೆ ಸ್ವಭಾವವಿರುತ್ತೆ. ಇವು ನಿಶಾಚರಿ ಜೀವಿಗಳಾದ್ದರಿಂದ ಜನರ ಕಣ್ಣಿಗೆ ಬೀಳುವುದು ಅಪರೂಪ. ತಂಪು ಹವೆಯ ಎಲೆ ತೋಟಗಳು, ಮಾವಿನಮರ, ನೀಲಗಿರಿ, ಆಲ, ಅರಳಿ, ಹುಣಸೆ ಮರಗಳಲ್ಲಿ ಇವು ಬೀಡು ಬಿಡುತ್ತವೆ. ಹಣ್ಣು, ಕಾಯಿ, ಕೀಟ, ಜೀರುಂಡೆ, ಮಿಡತೆ, ಹಲ್ಲಿ, ಹಾವುರಾಣಿ, ಹಕ್ಕಿಗಳ ಮೊಟ್ಟೆ, ಮರಗಪ್ಪೆ ತಿನ್ನುತ್ತವೆ ಎಂದು ಪ್ರಾಣಿ ಪ್ರಿಯರು ಹೇಳುತ್ತಾರೆ.
Slender loris also called as kadu papa was found in Chikmagalur we're people thronged to click selfies with the animal.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm